26.7 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಬಳಂಜ:ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

ಬಳಂಜ:ಅಟ್ಲಾಜೆ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಜಾನಕಿ(50)ವರ್ಷ ಇಂದು ಸಂಜೆ ಆಗಸ್ಟ್ 31 ರಂದು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಜಾನಕಿಯವರು ಹಲವು ವರ್ಷಗಳಿಂದ ಬಳಂಜ ಗ್ರಾಮದ ಅಟ್ಲಾಜೆ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಪುಟಾಣಿ ಮಕ್ಕಳ ಅಪಾರ ಪ್ರೀತಿಗೆ ಪಾತ್ರರಾಗಿದ್ದರು. ಊರಿನ ಜನರೊಂದಿಗೂ ಉತ್ತಮ ಸ್ನೇಹ,ಪ್ರೀತಿ ಮತ್ತು ಅನೋನ್ಯತೆಯನ್ನು ಹೊಂದಿದ್ದ ಜಾನಕಿಯವರು ಕೆಲವು ದಿನಗಳಿಂದ ಸುಸ್ತು ಮತ್ತು ಜ್ವರದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು ಇಂದು ಮಧ್ಯಾಹ್ನ ಬಳಂಜದ ತನ್ನ ಮನೆಯಿಂದ ಬಂಟ್ವಾಳದಲ್ಲಿರುವ ತಾಯಿ ಮನೆಗೆ ತೆರಳಿದ್ದ ಸಂದರ್ಭ ಮತ್ತೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತಿ ಸಂಜೀವ,ಓರ್ವ ಪುತ್ರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕರಿಯ ಗೌಡ ಕೆರೆಗೆ ಬಿದ್ದು ಮೃತ್ಯು

Suddi Udaya

ತೋಟತ್ತಾಡಿ ನಿವಾಸಿ ರೋಸಮ್ಮ ಜೋಸೆಫ್ ನಿಧನ

Suddi Udaya

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya
error: Content is protected !!