23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ವೇಣೂರು:ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ. 01ರಂದು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಂಘವು 2023-24ನೇ ಸಾಲಿನಲ್ಲಿ 328 .42 ಕೋಟಿ ವ್ಯವಹಾರ ನಡೆಸಿದ್ದು, ರೂ.1,59,04,380.70 ಲಾಭ ಗಳಿಸಿರುತ್ತದೆ . ಸಂಘದ ಸದಸ್ಯರಿಗೆ ಶೇ.20% ಡಿವಿಡೆಂಡ್ ಘೋಷಿಸಲಾಯಿತು.

ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಸ್ವಾಗತಿಸಿ,ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ ವಾರ್ಷಿಕ ವರದಿ ಹಾಗೂ ಸಂಘದ ಲೆಕ್ಕಪತ್ರಗಳನ್ನು ಮಂಡಿಸಿದರು .

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಸುಂದರ್ ಪೂಜಾರಿ ,ನಿರ್ದೇಶಕರುಗಳಾದ ರಾಮದಾಸ್ ನಾಯಕ್, ನಾಗಪ್ಪ, ರತ್ನಾಕರ.ಬಿ ,ಸುಧೀರ್ ಭಂಡಾರಿ ,ಗಣಪತಿ ಪ್ರಸನ್ನ , ದೋಗು ನಾಯ್ಕ, ಶ್ರೀಮತಿ ಆಶಾ, ವೀಣಾ ದೇವಾಡಿಗ, ಸಂದೀಪ್ ಹೆಗ್ಡೆ ,ಎಂ. ಆರ್ ಸಂತೋಷ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮೇಲ್ವಿಚಾರಕರಾದ ಸಿರಾಜುದ್ದೀನ್ , ಲೆಕ್ಕಿಗರಾದ ಭರತ್ ರಾಜ್ .ಕೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಘದ ಸದಸ್ಯರ ಎಸ್ ಎಸ್ ಎಲ್ ಸಿ ಗಿಂತ ಹೆಚ್ಚಿನ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಭತ್ತದ ಕೃಷಿ ಬೆಳೆಯುವ ಸಂಘದ ಸದಸ್ಯರಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಸಂಘದ ಹಿರಿಯ 12 ಮಂದಿ ಸದಸ್ಯರನ್ನು ಗೌರವಿಸಲಾಯಿತು. ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕರಿಮಣೇಲು ಗ್ರಾಮದ ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ, ಹೈನುಗಾರಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ಹರೀಶ್ ನೀರಪಲ್ಕೆ ಹಾಗೂ ಉತ್ತಮ ಪ್ರಗತಿಪರ ಕೃಷಿ ಕೃಷಿಕರಾದ ಗುಣಪಾಲ ಅತಿಕಾರಿ ಕಡಂಬಿಲ ಇವರನ್ನು ಸನ್ಮಾನಿಸಲಾಯಿತು.

ನಿರ್ದೇಶಕರಾದ ಸುಧೀರ್ ಭಂಡಾರಿ ಧನ್ಯವಾದ ಸಲ್ಲಿಸಿದರು.

Related posts

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ: ಬೆಳ್ತಂಗಡಿ ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

Suddi Udaya

ಕಕ್ಕಿಂಜೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌ನಿಂದ ಟ್ರಾಫಿಕ್ ಕಿರಿಕಿರಿ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya
error: Content is protected !!