July 23, 2026
ಕ್ರೀಡಾ ಸುದ್ದಿ

ಸ್ವಾಗತ್ ಫ್ರೆಂಡ್ಸ್ ಪೆರಿಂಜೆ ಆಶ್ರಯದಲ್ಲಿ ಗಣೇಶ್ ಚತುರ್ಥಿಯ ಪ್ರಯುಕ್ತ 11ನೇ ವರ್ಷದ ಕ್ರೀಡಾಕೂಟ

ಪೆರಿಂಜೆ : ಸ್ವಾಗತ್ ಫ್ರೆಂಡ್ಸ್ ಪೆರಿಂಜೆ ಇದರ ಆಶ್ರಯದಲ್ಲಿ ಗಣೇಶ್ ಚತುರ್ಥಿಯ ಪ್ರಯುಕ್ತ 11ನೇ ವರ್ಷದ ಕ್ರೀಡಾಕೂಟವು ಪೆರಿಂಜೆ ಪಜಂಬಾಡಿ ಕ್ರೀಡಾoಗಣದಲ್ಲಿ ಜರಗಿತು.ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಹೊಸಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಹರಿಪ್ರಸಾದ್ ವಹಿಸಿದರು. ಮುಖ್ಯ ಅತಿಥಿಯಾಗಿ ಹೊಕ್ಕಾಡಿಗೋಳಿ ಕಂಬಳ ಸಮಿತಿ ಅಧ್ಯಕ್ಷರಾದ ರಶ್ಮಿತ್ ಶೆಟ್ಟಿ ನೋಣಾಲುಗುತ್ತು, ಹೊಸಂಗಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಶಾಂತ,
ಹಿರಿಯರಾದ ಬೂಬ ಬಡಕೋಡಿ,ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ,ಸಂಗಮ್ ಪೇರಿ, ಬಿಜೆಪಿ ಎಸ್. ಸಿ. ಮೋರ್ಚಾ ಬೆಳ್ತಂಗಡಿ ಮಂಡಲದ ಉಪಾಧ್ಯಕ್ಷ ಸುರೇಶ್ ಆರಂಬೋಡಿ, ಸ್ವಾಗತ್ ಫ್ರೆಂಡ್ಸ್ ನ ಅಧ್ಯಕ್ಷರು ರಘುನಾಥ್ ಪಜಂಬಾಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪೆರಿಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು ವಿಠಲ ಸಿ ಪೂಜಾರಿ, ಆನಂದ ಪೂಜಾರಿ, ಕೋಡಿoಗೇರಿ, ಮಾಜಿ ತಾ.ಪಂ. ಸದಸ್ಯ ಓಬಯ್ಯ್ ಆರಂಬೋಡಿ, ಪೆರಿಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಸುಧಾಕರ ಪೂಜಾರಿ,ಹೊಸಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಅಕ್ಕು ಪಟ್ಟಾಡಿ,ಅವಿನಾಶ್ ಕುರ್ಲೊಟ್ಟು, ಗುರುಪ್ರಸಾದ್ ಮಲಿಯಾಲಪಲ್ಕೆ,ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು. ಪ್ರವೀಣ್ ಸೂರ್ಯ ಹೊಸಂಗಡಿ ಕಾರ್ಯಕ್ರಮ ನಿರೂಪಿಸಿ,ದಿನೇಶ್ ಪಟ್ಟಾಡಿ ಸ್ವಾಗತಿಸಿ, ಅನಿಲ್ ಕುಮಾರ್ ಪಜಂಬಾಡಿ ಧನ್ಯವಾದ ನೀಡಿದರು

Related posts

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ 4ನೇ ವರ್ಷದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆ ವೇಣೂರು ಪ್ರೌಢ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆಗೆ ಆಯ್ಕೆ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!