26.1 C
ಪುತ್ತೂರು, ಬೆಳ್ತಂಗಡಿ
September 11, 2026
ಕ್ರೀಡಾ ಸುದ್ದಿ

ಸ್ವಾಗತ್ ಫ್ರೆಂಡ್ಸ್ ಪೆರಿಂಜೆ ಆಶ್ರಯದಲ್ಲಿ ಗಣೇಶ್ ಚತುರ್ಥಿಯ ಪ್ರಯುಕ್ತ 11ನೇ ವರ್ಷದ ಕ್ರೀಡಾಕೂಟ

ಪೆರಿಂಜೆ : ಸ್ವಾಗತ್ ಫ್ರೆಂಡ್ಸ್ ಪೆರಿಂಜೆ ಇದರ ಆಶ್ರಯದಲ್ಲಿ ಗಣೇಶ್ ಚತುರ್ಥಿಯ ಪ್ರಯುಕ್ತ 11ನೇ ವರ್ಷದ ಕ್ರೀಡಾಕೂಟವು ಪೆರಿಂಜೆ ಪಜಂಬಾಡಿ ಕ್ರೀಡಾoಗಣದಲ್ಲಿ ಜರಗಿತು.ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಹೊಸಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಹರಿಪ್ರಸಾದ್ ವಹಿಸಿದರು. ಮುಖ್ಯ ಅತಿಥಿಯಾಗಿ ಹೊಕ್ಕಾಡಿಗೋಳಿ ಕಂಬಳ ಸಮಿತಿ ಅಧ್ಯಕ್ಷರಾದ ರಶ್ಮಿತ್ ಶೆಟ್ಟಿ ನೋಣಾಲುಗುತ್ತು, ಹೊಸಂಗಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಶಾಂತ,
ಹಿರಿಯರಾದ ಬೂಬ ಬಡಕೋಡಿ,ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ,ಸಂಗಮ್ ಪೇರಿ, ಬಿಜೆಪಿ ಎಸ್. ಸಿ. ಮೋರ್ಚಾ ಬೆಳ್ತಂಗಡಿ ಮಂಡಲದ ಉಪಾಧ್ಯಕ್ಷ ಸುರೇಶ್ ಆರಂಬೋಡಿ, ಸ್ವಾಗತ್ ಫ್ರೆಂಡ್ಸ್ ನ ಅಧ್ಯಕ್ಷರು ರಘುನಾಥ್ ಪಜಂಬಾಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪೆರಿಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು ವಿಠಲ ಸಿ ಪೂಜಾರಿ, ಆನಂದ ಪೂಜಾರಿ, ಕೋಡಿoಗೇರಿ, ಮಾಜಿ ತಾ.ಪಂ. ಸದಸ್ಯ ಓಬಯ್ಯ್ ಆರಂಬೋಡಿ, ಪೆರಿಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಸುಧಾಕರ ಪೂಜಾರಿ,ಹೊಸಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಅಕ್ಕು ಪಟ್ಟಾಡಿ,ಅವಿನಾಶ್ ಕುರ್ಲೊಟ್ಟು, ಗುರುಪ್ರಸಾದ್ ಮಲಿಯಾಲಪಲ್ಕೆ,ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು. ಪ್ರವೀಣ್ ಸೂರ್ಯ ಹೊಸಂಗಡಿ ಕಾರ್ಯಕ್ರಮ ನಿರೂಪಿಸಿ,ದಿನೇಶ್ ಪಟ್ಟಾಡಿ ಸ್ವಾಗತಿಸಿ, ಅನಿಲ್ ಕುಮಾರ್ ಪಜಂಬಾಡಿ ಧನ್ಯವಾದ ನೀಡಿದರು

Related posts

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಸೆಲೆಕ್ಷನ್ ಟ್ರಯಾಲ್ಸ್: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಲಿಶನ್ ಹೈಜಂಪ್‌ನಲ್ಲಿ ದ್ವಿತೀಯ-ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಂದಾರು : ದ.ಕ.ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ – ಕುಂಭಾ ಸಮಾಗಮ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya
error: Content is protected !!