25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ


ಬೆಳಾಲು: ಮಾಚಾರು ಪ್ರಗತಿ ಯುವಕ ಮಂಡಲ (ರಿ) ಮಾಚಾರು, ಪ್ರಗತಿ ಯುವತಿ ಮಂಡಲ ಮತ್ತು ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ(ರಿ) ಇವರ ಸಂಯುಕ್ತ ಆಶ್ರಯದಲ್ಲಿ 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉದ್ಘಾಟನಾ ಸಮಾರಂಭ ನಡೆಯಿತು.

ಕಾರ್ಯಕ್ರಮವನ್ನು ಉಜಿರೆ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್ ಗೌಡ ಮಾತನಾಡಿ,’ಶ್ರೀ ಕೃಷ್ಣ ಜನ್ಮಾಷ್ಟಮಿ ಯಂತಹ ಆಚರಣೆಗಳು ಮಕ್ಕಳಲ್ಲಿ ನಮ್ಮ ಸಂಸ್ಕೃತಿ,ಸಂಸ್ಕಾರವನ್ನು ಬೆಳೆಸುವ ಮೂಲಕ ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿಸುತ್ತದೆ. ಮಾಚಾರಿನ ಪರಿಸರದಲ್ಲಿ ನಡೆಯುತ್ತಿರುವ ಇಂತಹ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಮಗೆಲ್ಲಾ ಪ್ರೇರಣೆ’ ಎಂದರು.

ವೇದಿಕೆಯಲ್ಲಿ ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘ ಬದನಾಜೆಯ ಅಧ್ಯಕ್ಷರಾದ ಶ್ರೀ ರಾಮಯ್ಯಗೌಡ,ಭಜನಾ ಮಂಡಳಿಯ ಕಟ್ಟಡ ಸಮಿತಿಯ ಅಧ್ಯಕ್ಷರಾದ ದಿಲೀಪ್ ನಾಯರ್,ಅರ್ಚಕರಾದ ಶಶಿಧರ ರಾವ್ ಕಟ್ಟದಬೈಲು,ಗ್ರಾ.ಪಂ.ಸದಸ್ಯರಾದ ಅನಿಲ್ ಡಿಸೋಜ,ಪ್ರಗತಿ ಯುವಕ ಮಂಡಲದ ಅಧ್ಯಕ್ಷರಾದ ಸೋಮಶೇಖರ್ ಕೆ,ಯುವತಿ ಮಂಡಲದ ಉಪಾಧ್ಯಕ್ಷರಾದ ಶ್ರೀಮತಿ ದಿಶಾ ದಿಲೀಪ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ಪರ್ಧೆಯಲ್ಲಿ ವಿಜೇತ ಶಾಲಾ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮವನ್ನು ಯುವಕ ಮಂಡಲದ ಕಾರ್ಯದರ್ಶಿ, ಶಿಕ್ಷಕ ಸುರೇಶ್ ಮಾಚಾರ್ ನಿರ್ವಹಿಸಿದರು. ಸದಸ್ಯೆ ಕು.ಜೀವಿತಾ ವಂದಿಸಿದರು.

Related posts

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

Suddi Udaya
error: Content is protected !!