25.5 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ ಸಂಭ್ರಮ: ಉಜಿರೆಯಲ್ಲಿ ಬೃಹತ್ ಹಿಂದೂ ಸಮಾವೇಶ-ಉಜಿರೆ ಕಾಲೇಜು ಬಳಿಯಿಂದ ವೈಭವಪೂರ್ಣ ಶೋಭಾಯಾತ್ರೆ

ಉಜಿರೆ: ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಇದರ ವತಿಯಿಂದ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ ಸಂಭ್ರಮದ ಅಂಗವಾಗಿ ಬೃಹತ್ ಹಿಂದೂ ಸಮಾವೇಶ ಹಾಗೂ ಬೃಹತ್ ಶೋಭಾಯಾತ್ರೆ ಸೆ.1ರಂದು ಉಜಿರೆಯಲ್ಲಿ ಜರುಗಿತು.

ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಿಂದ ಪ್ರಾರಂಭಗೊಂಡ ಬೃಹತ್ ಶೋಭಾಯಾತ್ರೆಗೆ ಹಿರಿಯರಾದ ಶೇಷಗಿರಿ ಶೆಣೈ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಎಸ್‌ಡಿಎಂ ಎಜ್ಯುಕೇಶನಲ್ ಸೊಸೈಟಿ ಕಾರ್ಯದರ್ಶಿ ಪ್ರೊ| ಸತೀಶ್ಚಂದ್ರ ಸುರ್ಯಗುತ್ತು, ಆರ್‌ಎಸ್‌ಎಸ್ ಸಂಘ ಚಾಲಕ ಗಣೇಶ್ ಭಟ್ ಕಾಂತಾಜೆ, ಉದ್ಯಮಿ ದಯಾಕರ್ ಪಂಚಶ್ರೀ ಉಜಿರ ಉಪಸ್ಥಿತರಿದ್ದರು.

ಕ್ರೀಡಾಂಗಣದ ಬಳಿಯಿಂದ ವಿವಿಧ ವೇಷ ಭೂಷಣಗಳ ಬೃಹತ್ ಶೋಭಾಯಾತ್ರೆಯು ಉಜಿರೆ ದೇವಸ್ಥಾನದ ತನಕ ವಿಜೃಂಭಣೆಯಿಂದ ಜರುಗಿತು. ಕೃಷ್ಣವೇಶ, 60 ಭಜನಾ ತಂಡಗಳಿಂದ ಕುಣಿತ ಭಜನೆ, ಚೆಂಡೆ, ವಾದ್ಯ, ಕೀಲುಕುದುರೆ, ಬ್ಯಾಂಡ್, ಬೈಕ್ ರ‍್ಯಾಲಿ, ವಿಶ್ವಹಿಂದೂ ಪರಿಷದ್ ಸಾಧನೆಯ 60 ಸವಿನೆನಪುಗಳ ಪ್ರದರ್ಶನ ಶೋಭಾಯಾತ್ರೆಗೆ ವಿಶೇಷ ಮೆರಗು ನೀಡಿತು.

ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿ.ಹಿಂ.ಪ. ಷಷ್ಠಿಪೂರ್ತಿ ಉತ್ಸವ ಸಮಿತಿ ಅಧ್ಯಕ್ಷ ಡಾ. ಎಂ.ಎಂ ದಯಾಕರ್ ವಹಿಸಿದ್ದರು. ಉದ್ಘಾಟನೆಯನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ

ಮೊಕ್ತೇಸರರಾದ ಶರತ್‌ಕೃಷ್ಣ ಪಡ್ವೆಟ್ನಾಯ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ, ಬೆನಕ ಹೆಲ್ತ್ ಸೆಂಟರ್ ಉಜಿರೆಯ ಮುಖ್ಯಸ್ಥರಾದ ಡಾ| ಭಾರತಿ ಜಿ.ಕೆ, ವಿ.ಹಿಂ.ಪ. ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಎಕ್ಸೆಲ್ ಕಾಲೇಜು

ಗುರುವಾಯನಕೆರೆಯ ಆಡಳಿತ ಹಾಗೂ ನಿರ್ದೇಶಕ ಸುಮಂತ್ ಕುಮಾರ್ ಜೈನ್, ನಾರಾಯಣ ಗೌಡ ಕೊಳಂಬೆ ಪಂಚಶ್ರೀ ಸೋಮಂತ್ತಡ್ಕ ಭಾಗವಹಿಸಿದ್ದರು. ವಿಹಿಂಪ ಮಂಗಳೂರು ವಿಭಾಗ ಕಾಯ೯ದಶಿ೯ ದೇವಿಪ್ರಸಾದ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ವಿವಿಧ ಸಂಘಟನೆಗಳ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.
ವಿಹಿಂಪ ಷಷ್ಠಿ ಪೂರ್ತಿ ಉತ್ಸವ ಸಮಿತಿ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ಕೋಶಾಧಿಕಾರಿ ಪದ್ಮನಾಭ ಶೆಟ್ಟಿಗಾರ್, ಸಂಚಾಲಕ ಸಂಪತ್ ಬಿ. ಸುವರ್ಣ, ಸಹ ಸಂಚಾಲಕ ಬಾಲಕೃಷ್ಣ ಶೆಟ್ಟಿ ಉಜಿರೆ, ವಿಹಿಂಪ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ,

ಬಜರಂಗದಳ ಸಂಯೋಜಕ ಸಂತೋಷ್ ಅತ್ತಾಜೆ, ಸಹ ಸಂಯೋಜಕ ಸತೀಶ್ ಮರಕ್ಕಡ, ಸತ್ಸಂಗ ಪ್ರಮುಖ್ ಅಶೋಕ್ ಕಳೆಂಜ, ಸೇವಾ ಪ್ರಮುಖ್ ವಿನೋದ್ ಮದ್ದಡ್ಕ, ವಿದ್ಯಾರ್ಥಿ ಪ್ರಮುಖ್ ಅಖಿಲ್ ರೆಖ್ಯ, ವಿಹಿಂಪ ಉಪಾಧ್ಯಕ್ಷ ಸತೀಶ್ ನೆರಿಯ, ಗೋರಕ್ಷಾ ಪ್ರಮುಖ್ ವಿಹಿಂಪ ರಮೇಶ್ ಧರ್ಮಸ್ಥಳ, ಗೋರಕ್ಷಕ್ ಪ್ರಮುಖ್ ಬಜರಂಗದಳ ಅನಂತ್ ಉಜಿರೆ, ಸಹ ಸಂಯೋಜಕ್ ಪ್ರಶಾಂತ್ ಕೊಕ್ಕಡ, ಪ್ರಚಾರ ಮತ್ತು ಪ್ರಸಾರ ನಾಗೇಶ್ ಕಲ್ಮಂಜ, ಸುರಕ್ಷ ಪ್ರಮುಖ

ರಾಜೇಶ್ ನಿಡ್ಲೆ, ಮಾತೃಶಕ್ತಿ ಪ್ರಮುಖ್ ಶ್ರೀಮತಿ ವಿದ್ಯಾ, ದುರ್ಗಾವಾಹಿನಿ ಸಂಯೋಜಕ ಕು. ಶ್ವೇತಾ ಬೆಳಾಲ್ ಸಹಕರಿಸಿದರು.ಶಿವಶಂಖರ್ ಗೇರುಕಟ್ಟೆ ವಂದೇಮಾತರಂ ಹಾಡಿದರು.ಸಂಪತ್ ಸುವರ್ಣ ಸ್ವಾಗತಿಸಿದರು. ಮೋಹನ್ ಬೆಳ್ತಂಗಡಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಅ.15-22: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya
error: Content is protected !!