25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ವೇಣೂರು:ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ. 01ರಂದು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಂಘವು 2023-24ನೇ ಸಾಲಿನಲ್ಲಿ 328 .42 ಕೋಟಿ ವ್ಯವಹಾರ ನಡೆಸಿದ್ದು, ರೂ.1,59,04,380.70 ಲಾಭ ಗಳಿಸಿರುತ್ತದೆ . ಸಂಘದ ಸದಸ್ಯರಿಗೆ ಶೇ.20% ಡಿವಿಡೆಂಡ್ ಘೋಷಿಸಲಾಯಿತು.

ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಸ್ವಾಗತಿಸಿ,ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ ವಾರ್ಷಿಕ ವರದಿ ಹಾಗೂ ಸಂಘದ ಲೆಕ್ಕಪತ್ರಗಳನ್ನು ಮಂಡಿಸಿದರು .

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಸುಂದರ್ ಪೂಜಾರಿ ,ನಿರ್ದೇಶಕರುಗಳಾದ ರಾಮದಾಸ್ ನಾಯಕ್, ನಾಗಪ್ಪ, ರತ್ನಾಕರ.ಬಿ ,ಸುಧೀರ್ ಭಂಡಾರಿ ,ಗಣಪತಿ ಪ್ರಸನ್ನ , ದೋಗು ನಾಯ್ಕ, ಶ್ರೀಮತಿ ಆಶಾ, ವೀಣಾ ದೇವಾಡಿಗ, ಸಂದೀಪ್ ಹೆಗ್ಡೆ ,ಎಂ. ಆರ್ ಸಂತೋಷ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮೇಲ್ವಿಚಾರಕರಾದ ಸಿರಾಜುದ್ದೀನ್ , ಲೆಕ್ಕಿಗರಾದ ಭರತ್ ರಾಜ್ .ಕೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಘದ ಸದಸ್ಯರ ಎಸ್ ಎಸ್ ಎಲ್ ಸಿ ಗಿಂತ ಹೆಚ್ಚಿನ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಭತ್ತದ ಕೃಷಿ ಬೆಳೆಯುವ ಸಂಘದ ಸದಸ್ಯರಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಸಂಘದ ಹಿರಿಯ 12 ಮಂದಿ ಸದಸ್ಯರನ್ನು ಗೌರವಿಸಲಾಯಿತು. ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕರಿಮಣೇಲು ಗ್ರಾಮದ ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ, ಹೈನುಗಾರಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ಹರೀಶ್ ನೀರಪಲ್ಕೆ ಹಾಗೂ ಉತ್ತಮ ಪ್ರಗತಿಪರ ಕೃಷಿ ಕೃಷಿಕರಾದ ಗುಣಪಾಲ ಅತಿಕಾರಿ ಕಡಂಬಿಲ ಇವರನ್ನು ಸನ್ಮಾನಿಸಲಾಯಿತು.

ನಿರ್ದೇಶಕರಾದ ಸುಧೀರ್ ಭಂಡಾರಿ ಧನ್ಯವಾದ ಸಲ್ಲಿಸಿದರು.

Related posts

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

Suddi Udaya

ನಾರಾವಿ ಗ್ರಾ.ಪಂ ಮಾಜಿ‌ ಸದಸ್ಯ ಕುತ್ಲೂರು ರಾಮಚಂದ್ರ ಭಟ್ ನಿಧನ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ನಡ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷಾಚಾರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!