July 23, 2026
ಕ್ರೀಡಾ ಸುದ್ದಿ

ಸ್ವಾಗತ್ ಫ್ರೆಂಡ್ಸ್ ಪೆರಿಂಜೆ ಆಶ್ರಯದಲ್ಲಿ ಗಣೇಶ್ ಚತುರ್ಥಿಯ ಪ್ರಯುಕ್ತ 11ನೇ ವರ್ಷದ ಕ್ರೀಡಾಕೂಟ

ಪೆರಿಂಜೆ : ಸ್ವಾಗತ್ ಫ್ರೆಂಡ್ಸ್ ಪೆರಿಂಜೆ ಇದರ ಆಶ್ರಯದಲ್ಲಿ ಗಣೇಶ್ ಚತುರ್ಥಿಯ ಪ್ರಯುಕ್ತ 11ನೇ ವರ್ಷದ ಕ್ರೀಡಾಕೂಟವು ಪೆರಿಂಜೆ ಪಜಂಬಾಡಿ ಕ್ರೀಡಾoಗಣದಲ್ಲಿ ಜರಗಿತು.ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಹೊಸಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಹರಿಪ್ರಸಾದ್ ವಹಿಸಿದರು. ಮುಖ್ಯ ಅತಿಥಿಯಾಗಿ ಹೊಕ್ಕಾಡಿಗೋಳಿ ಕಂಬಳ ಸಮಿತಿ ಅಧ್ಯಕ್ಷರಾದ ರಶ್ಮಿತ್ ಶೆಟ್ಟಿ ನೋಣಾಲುಗುತ್ತು, ಹೊಸಂಗಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಶಾಂತ,
ಹಿರಿಯರಾದ ಬೂಬ ಬಡಕೋಡಿ,ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ,ಸಂಗಮ್ ಪೇರಿ, ಬಿಜೆಪಿ ಎಸ್. ಸಿ. ಮೋರ್ಚಾ ಬೆಳ್ತಂಗಡಿ ಮಂಡಲದ ಉಪಾಧ್ಯಕ್ಷ ಸುರೇಶ್ ಆರಂಬೋಡಿ, ಸ್ವಾಗತ್ ಫ್ರೆಂಡ್ಸ್ ನ ಅಧ್ಯಕ್ಷರು ರಘುನಾಥ್ ಪಜಂಬಾಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪೆರಿಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು ವಿಠಲ ಸಿ ಪೂಜಾರಿ, ಆನಂದ ಪೂಜಾರಿ, ಕೋಡಿoಗೇರಿ, ಮಾಜಿ ತಾ.ಪಂ. ಸದಸ್ಯ ಓಬಯ್ಯ್ ಆರಂಬೋಡಿ, ಪೆರಿಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಸುಧಾಕರ ಪೂಜಾರಿ,ಹೊಸಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಅಕ್ಕು ಪಟ್ಟಾಡಿ,ಅವಿನಾಶ್ ಕುರ್ಲೊಟ್ಟು, ಗುರುಪ್ರಸಾದ್ ಮಲಿಯಾಲಪಲ್ಕೆ,ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು. ಪ್ರವೀಣ್ ಸೂರ್ಯ ಹೊಸಂಗಡಿ ಕಾರ್ಯಕ್ರಮ ನಿರೂಪಿಸಿ,ದಿನೇಶ್ ಪಟ್ಟಾಡಿ ಸ್ವಾಗತಿಸಿ, ಅನಿಲ್ ಕುಮಾರ್ ಪಜಂಬಾಡಿ ಧನ್ಯವಾದ ನೀಡಿದರು

Related posts

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya

ಉಜಿರೆ: ಪ.ಪೂ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಪ.ಪೂ ಕಾಲೇಜಿಗೆ ಚಾಂಪಿಯನ್ ಪ್ರಶಸ್ತಿ:

Suddi Udaya

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

Suddi Udaya
error: Content is protected !!