July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

ಅಂಡಿಂಜೆ: ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 2 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಶ್ರೀ ವಿನಾಯಕ ಶ್ರೀರಾಮ ಭಜನಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಧೀಶ್ಚಂದ್ರ ಹೆಗ್ಡೆ ಕೊಕ್ರಾಡಿ ನೇರವೇರಿಸಿ ಶುಭ ಕೋರಿದರು. ಅಧ್ಯಕ್ಷತೆ ಅಂಡಿಂಜೆ ಯುವಕ‌ ಮಂಡಲದ ಅಧ್ಯಕ್ಷ ಪ್ರಾಣೇಶ್ ಮುಂಡೇವು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಸಂತ ಸಾಲ್ಯಾನ್ ಹಿಂಪ್ಲೊಟ್ಟು, ನಿತಿನ್ ಮುಂಡೇವು ಅಧ್ಯಕ್ಷರು ಗ್ರಾಮ ಪಂಚಾಯತ್ ಅಂಡಿಂಜೆ,
ಗಿರೀಶ್ ಮೂಡುಕೋಡಿ ನ್ಯೂ ಹಲೆಕ್ಕಿ, ರಾಜಶೇಖರ್ ಅಂಡಿಂಜೆ, ಮಹಾಬಲ ನೆಲ್ಲಿಂಗೇರಿ, ಯೋಗೀಶ್ ಕಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳೆಯರಿಗೆ, ಮಕ್ಕಳಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ದೆಗಳು ನಡೆಯಿತು. ಹಲವಾರು ಮಕ್ಕಳು ಕೃಷ್ಣವೇಷ ಸ್ಪರ್ದೆಯಲ್ಲಿ ಭಾಗವಹಿಸಿ ಬಹುಮಾನ ಪಡೆದರು.

ಪ್ರಶಾಂತ್ ಮಂಜುಗಿರಿ ಸ್ವಾಗತಿಸಿ, ಅಶ್ವಿನ್ ಮುಂಡೇವು ವಂದಿಸಿದರು. ದಿವ್ಯ ಪ್ರಶಾಂತ್ ನಿರೂಪಿಸಿದರು.
ಪ್ರವೀಣ್ ನವಜ್ಯೋತಿ, ರಾಜೇಶ್ ಮುಂಡೆವು,ಮಿಥುನ್ ದುಗಣಬೆಟ್ಟು,ಶಶಿ ಹೆಗ್ಡೆ ಹಾಗೂ ಯುವಕ ಮಂಡಲದ ಸದಸ್ಯರು ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya
error: Content is protected !!