September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು ಮತ್ತು ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು ಇದರ ಪ್ರಾಯೋಜಕತ್ವದಲ್ಲಿ ಸಾರ್ವಜನಿಕ ಕೆಸರು ಗದ್ದೆ ಕ್ರೀಡಾಕೂಟ ದೇವನಾರಿ ಗಂಗಯ್ಯ ಮುಗೇರ ಇವರ ಗದ್ದೆಯಲ್ಲಿ ಸೆ.1 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸತೀಶ್ ಜೈನ್ ಬೆಳ್ಳೂರು ಗುತ್ತು ಇವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಗೌರವ ಅಧ್ಯಕ್ಷ ಡಾ| ಪ್ರದೀಪ್ ಎ ಹಾಗೂ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರು ಕ್ರೀಡಾ ಕೂಟಕ್ಕೆ ಶುಭ ಹಾರೈಸಿದರು, ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು ಇದರ ಅಧ್ಯಕ್ಷ ಯತೀಶ್ ನೆರೋಲ್ದಪಲ್ಕೆ, ಪ್ರ.ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಗಂಗಯ್ಯ ಮುಗೇರ, ಸುರೇಶ್ ನಾವೂರು, ವಿಜಯ ಗೌಡ ಪಡೆಂಕ್ಕಲ್, ಸುಂದರ ಎ, ಪದಾಧಿಕಾರಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಮಹಿಳೆಯರು, ಕ್ರೀಡಾ ಪಟುಗಳು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಅಂಗನವಾಡಿ ಮಕ್ಕಳಿಗೆ, ಬಾಲಕ, ಬಾಲಕಿಯರ ವಿಭಾಗ, ಮಹಿಳಾ ಹಾಗೂ ಪುರುಷರ ವಿಭಾಗದಲ್ಲಿ ಪ್ರತ್ಯೇಕವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು, ಕ್ರೀಡಾಕೂಟದ ಬಹುಮಾನ ವಿತರಣೆಯನ್ನು ಸೆ. 8 ರಂದು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.


ಸೆ. 07 , 8 ರಂದು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ

Related posts

ಪದ್ಮುಂಜ: ಮಾ.1-6 : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಶ್ರೀ ಧ ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾ ನಿಲಯದಲ್ಲಿ ವಿಶ್ವ ಧ್ಯಾನ ದಿನಾಚರಣೆ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya
error: Content is protected !!