September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

ಪುದುವೆಟ್ಟು : ಜೈನ ಧರ್ಮವು ಜಗತ್ತಿನ ಅತ್ಯಂತ ಪುರಾತನ ಧರ್ಮಗಳಲ್ಲಿ ಒಂದು ಜೈನ ಧರ್ಮದ ತತ್ವ ಸಿದ್ಧಾಂತಗಳು ವೈಜ್ಞಾನಿಕ ಹಿನ್ನೆಲೆಯಲ್ಲಿದೆ ಜೈನ ಧರ್ಮೀಯರಲ್ಲಿ ಜೈನ ಧರ್ಮದ ಪ್ರಜ್ಞೆ ಉಳಿಸಿ ಬೆಳೆಸುವಲ್ಲಿ ಜಿನಚೈತ್ಯಾಲಯಗಳು ಪೂರಕ ಮತ್ತು ಪ್ರೇರಕ ಅಂತೆಯೇ ಪುದುವೆಟ್ಟು ಗ್ರಾಮದ 600 ವರ್ಷಗಳ ಪುರಾತನ ಇತಿಹಾಸ ಹೊಂದಿರುವ ಭ| 1008 ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯು ಪಾಳುಬಿದ್ದಿತ್ತು ಈದೀಗ ಈ ಸೀಮೆಯ ಜೈನ ಗುರುಗಳಾದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರು ಶ್ರೀ ಜೈನ ಮಠ ಕಾರ್ಕಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ದಿವ್ಯ ಮಾರ್ಗದರ್ಶನ ಮತ್ತು ಆಶೀರ್ವಾದದೊಂದಿಗೆ ಮತ್ತು ಬಸದಿಗೆ ಸಂಬಂಧಪಟ್ಟ ಎಲ್ಲಾ ಮನೆತನಗಳು ಸೇರಿಕೊಂಡು ಜೀರ್ಣೋದ್ಧಾರ ನಡೆಸಲು ತೀರ್ಮಾನಿಸಿದ್ದು ಇದರ ಶಿಲಾನ್ಯಾಸ ಸಮಾರಂಭ ಆ.28 ರಂದು ಗುರುಗಳಾದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರು ಶ್ರೀ ಜೈನ ಮಠ ಕಾರ್ಕಳ ಇವರ ದಿವ್ಯ ಹಸ್ತದಿಂದ ಶಿಲಾನ್ಯಾಸ ಮತ್ತು ವಾಸ್ತು ತಜ್ಞ ಪಾದೂರು ಸುದರ್ಶನ್ ಇಂದ್ರ ಇವರ ಮಾರ್ಗದರ್ಶನದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭದಲ್ಲಿ ನಿಡ್ವಾಳ ಬಸದಿಗೆ ಸೇರಿರುವ ಎಲ್ಲಾ ಊರ ಪರವೂರ ಶ್ರಾವಕ ಶ್ರಾವಕೀಯರು ಭಾಗವಹಿಸಿದ್ದರು

Related posts

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya

ಸರ್ಕಾರಿ ಪ್ರೌಢಶಾಲೆ ವೇಣೂರುನಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ: ಪುಷ್ಪಾರ್ಚನೆ ಹಾಗೂ ಮೆರವಣಿಗೆ ಮೂಲಕ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

Suddi Udaya
error: Content is protected !!