23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬೆಳಾಲು : ಮೈತ್ರಿ ಯುವಕ ಮಂಡಲ ಬೆಳಾಲು ಇದರ ಆಶ್ರಯದಲ್ಲಿ 20ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಂಘದ ವಠಾರದಲ್ಲಿ ಸೆ 01 ರಂದು ನಡೆಯಿತು.

ನಿವೃತ್ತ ಜಲಾನಯನ ಅಧಿಕಾರಿ ನಾರಾಯಣ ಸುವರ್ಣ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಯುವಕ ಮಂಡಲದ ಸಮಾಜಮುಖಿ ಸಾಮಾಜಿಕ ಕೆಲಸ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬೆಳಾಲು ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಚಿದಾನಂದ ಕೆ ಹಾಗೂ ಬೆಳಾಲು ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನ ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ ಉಪ್ಪಾರು ಭಾಗವಹಿಸಿ ಶುಭ ಹಾರೈಸಿದರು.

ಮೈತ್ರಿ ಯುವಕ ಮಂಡಲ ಗೌರವಾಧ್ಯಕ್ಷರಾದ ರಾಜೇಶ್ ಪಾರಳ, ಅಧ್ಯಕ್ಷರಾದ ನಿತಿನ್ ಮೋನಿಶ್, ಕಾರ್ಯದರ್ಶಿ ವಿಘ್ನೇಶ್ ಹಾಗೂ ಗೌರವ ಸಲಹೆಗಾರರು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.


ಮುದ್ದು ಕೃಷ್ಣ ರಾಧೆ ವೇಷ ಎಲ್ಲರ ಮನಸೊರೆಗೊಂಡಿತು. ಗೌರವ ಸಲಹೆಗಾರರು ನೋಟರಿ ವಕೀಲರಾದ ಶ್ರೀನಿವಾಸ್ ಗೌಡ, ಅಧ್ಯಾಪಕ ಭರತ್ ಕಾರ್ಯಕ್ರಮ ನಿರ್ವಹಿಸಿದರು, ಸ್ವಾತಿ ಪ್ರಾರ್ಥನೆ ಸಲ್ಲಿಸಿ, ನಿತಿನ್ ಮೋನಿಶ್ ಸ್ವಾಗತಿಸಿ, ವಿಘ್ನೇಶ್ ಧನ್ಯವಾದವಿತ್ತರು.

Related posts

ಫೆ.13: ವಿದ್ಯುತ್ ನಿಲುಗಡೆ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ: ‘ ದಾನ ಪುರುಷಾರ್ಥ ‘ ಭಿತ್ತಿಪತ್ರಿಕೆ ಅನಾವರಣ

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya
error: Content is protected !!