25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆ ಸೆ 1ರಂದು ಬೆಳ್ತಂಗಡಿ ಸಿ ವಿ ಸಿ ಮಿನಿ ಹಾಲ್ ನಲ್ಲಿ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿಯ ಸದಸ್ಯರಾದ ಜಯಾನಂದ ಗೌಡ ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಅವರನ್ನು ಸಭೆಯಲ್ಲಿ ಗೌರವಿಸಲಾಯಿತು. ಸಂಘಟನೆಯ ಚಟುವಟಿಕೆಗಳ ಬಗ್ಗೆ ಹಾಗೂ ಹೆದ್ದಾರಿಯ ಕೆಲಸದ ರಸ್ತೆ ಅಗಲೀಕರಣದ ಸಂದರ್ಭದಲ್ಲಿ ವರ್ತಕರಿಗೆ ಆಗುವಂತಹ ತೊಂದರೆಗಳನ್ನು ಸಂಬಂಧ ಪಟ್ಟ ಇಲಾಖೆಯ ಗಮನಕ್ಕೆ ತಂದು ಸರಿಪಡಿಸುವ ಬಗ್ಗೆ ಚರ್ಚಿಸಲಾಯಿತು. ಮುಂದಿನ 2 ವರ್ಷದ ಅವಧಿಗೆ ನೂತನ ಪಧಾದಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ರೋನಾಲ್ಡ್ ಲೋಬೊ, ಪ್ರಧಾನ ಕಾರ್ಯದರ್ಶಿಯಾಗಿ ಲ್ಯಾನ್ಸಿ ಎ ಪಿರೇರಾ, ಕೋಶಾಧಿಕಾರಿಯಾಗಿ ಸುನೀಲ್ ಶೆಣೈ, ಉಪಾಧ್ಯಕ್ಷರಾಗಿ ಶಶಿಧರ ಪೈ ಆಯ್ಕೆಯಾದರು. ಹಾಗೂ 30 ಮಂದಿ ಸದಸ್ಯರನ್ನು ಆಡಳಿತ ಮಂಡಳಿಗೆ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

ಪ್ರಧಾನ ಕಾರ್ಯದರ್ಶಿ ರೋನಾಲ್ಡ್ ಲೋಬೊ ವರದಿ ಮಂಡಿಸಿದರು. ಕೋಶಾಧಿಕಾರಿ ಸುನೀಲ್ ಶೆಣೈ ಲೆಕ್ಕ ಪತ್ರ ಮಂಡಿಸಿದರು. ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಜತೆ ಕಾರ್ಯದರ್ಶಿ ಯಶವಂತ ಪಟವರ್ಧನ್ ಮಹಾಸಭೆಯ ನೋಟಿಸು ಓದಿ ದಾಖಲಿಸಿದರು. ಸುಶೀಲಾ ಹೆಗ್ಡೆ ಪ್ರಾರ್ಥನೆ ಗೈದರು. ಲ್ಯಾನ್ಸಿ ಎ ಪಿರೇರಾ ಕಾರ್ಯಕ್ರಮ ನಿರೂಪಿಸಿದರು.

Related posts

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya
error: Content is protected !!