23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಕೋಣೆಗಳ ಮೇಲ್ಛಾವಣಿ ಸೆ.1 ರಂದು ರಾತ್ರಿ ಸುರಿದ ಭಾರಿ ಮಳೆಗೆ ಕುಸಿದಿದ್ದು ಇದರ ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರವರಿಗೆ ಶಾಲಾ ಅಧ್ಯಕ್ಷರು, ಮುಖ್ಯೋಪಾಧ್ಯಾಯರು ಮನವಿಯನ್ನು ಸಲ್ಲಿಸಿದರು.

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯು 1951 ರಲ್ಲಿ ಸ್ಥಾಪನೆಯಾಗಿದ್ದು 2025-26 ನೇ ಸಾಲಿಗೆ 75 ವರ್ಷಗಳು ಪೂರೈಸಿರುತ್ತದೆ. ಪ್ರಸುತ್ತ ಶೈಕ್ಷಣಿಕ ವರ್ಷದಲ್ಲಿ 162 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಶಾಲೆಯ 4 ತರಗತಿಗಳನ್ನು ನಡೆಸುತ್ತಿರುವ ತರಗತಿ ಕೋಣೆಗಳ ಛಾವಣಿ ಸೆ.1 ರಂದು ರಾತ್ರಿ ಕುಸಿದಿರುತ್ತದೆ. ಕುಸಿದಿರುವ ತರಗತಿ ಕೋಣೆಗಳಲ್ಲಿ ತರಗತಿಗಳನ್ನು ನಡೆಸಲು ಅಸಾಧ್ಯವಾಗಿರುತ್ತದೆ. ಆದುದರಿಂದ ಸದ್ರಿ ಶಾಲೆಯ 4 ತರಗತಿ ಕೋಣೆಗಳ ಛಾವಣಿ ದುರಸ್ತಿ ಮಾಡಬೇಕಾಗಿರುವುದರಿಂದ ಅದಕ್ಕೆ ಬೇಕಾಗಿರುವ ಅನುದಾನವನ್ನು ಮಂಜೂರುಗೊಳಿಸಬೇಕಾಗಿ ವಿನಂತಿಸುತ್ತಿದ್ದೇವೆ. ಅಲ್ಲದೆ ಸದ್ರಿ ಶಾಲೆಗೆ 4 ಹೊಸ ತರಗತಿ ಕೋಣೆಗಳ ಅವಶ್ಯಕತೆ ಇರುವುದರಿಂದ ಮಂಜೂರುಗೊಳಿಸಬೇಕಾಗಿ ಸತೀಶ್ ಕಾಶಿಪಟ್ಣ ವಿನಂತಿಸಿದ್ದಾರೆ.

Related posts

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya
error: Content is protected !!