July 23, 2026
Uncategorized

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಕೋಣೆಗಳ ಮೇಲ್ಛಾವಣಿ ಸೆ.1 ರಂದು ರಾತ್ರಿ ಸುರಿದ ಭಾರಿ ಮಳೆಗೆ ಕುಸಿದಿದ್ದು ಇದರ ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರವರಿಗೆ ಶಾಲಾ ಅಧ್ಯಕ್ಷರು, ಮುಖ್ಯೋಪಾಧ್ಯಾಯರು ಮನವಿಯನ್ನು ಸಲ್ಲಿಸಿದರು.

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯು 1951 ರಲ್ಲಿ ಸ್ಥಾಪನೆಯಾಗಿದ್ದು 2025-26 ನೇ ಸಾಲಿಗೆ 75 ವರ್ಷಗಳು ಪೂರೈಸಿರುತ್ತದೆ. ಪ್ರಸುತ್ತ ಶೈಕ್ಷಣಿಕ ವರ್ಷದಲ್ಲಿ 162 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಶಾಲೆಯ 4 ತರಗತಿಗಳನ್ನು ನಡೆಸುತ್ತಿರುವ ತರಗತಿ ಕೋಣೆಗಳ ಛಾವಣಿ ಸೆ.1 ರಂದು ರಾತ್ರಿ ಕುಸಿದಿರುತ್ತದೆ. ಕುಸಿದಿರುವ ತರಗತಿ ಕೋಣೆಗಳಲ್ಲಿ ತರಗತಿಗಳನ್ನು ನಡೆಸಲು ಅಸಾಧ್ಯವಾಗಿರುತ್ತದೆ. ಆದುದರಿಂದ ಸದ್ರಿ ಶಾಲೆಯ 4 ತರಗತಿ ಕೋಣೆಗಳ ಛಾವಣಿ ದುರಸ್ತಿ ಮಾಡಬೇಕಾಗಿರುವುದರಿಂದ ಅದಕ್ಕೆ ಬೇಕಾಗಿರುವ ಅನುದಾನವನ್ನು ಮಂಜೂರುಗೊಳಿಸಬೇಕಾಗಿ ವಿನಂತಿಸುತ್ತಿದ್ದೇವೆ. ಅಲ್ಲದೆ ಸದ್ರಿ ಶಾಲೆಗೆ 4 ಹೊಸ ತರಗತಿ ಕೋಣೆಗಳ ಅವಶ್ಯಕತೆ ಇರುವುದರಿಂದ ಮಂಜೂರುಗೊಳಿಸಬೇಕಾಗಿ ಸತೀಶ್ ಕಾಶಿಪಟ್ಣ ವಿನಂತಿಸಿದ್ದಾರೆ.

Related posts

ಕಟ್ಟೆ: ಎಂಟು ಅಡಿ ಉದ್ದದ ಹೆಬ್ಬಾವು ಪತ್ತೆ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಮೇ. 7 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya
error: Content is protected !!