24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

ಅಂಡಿಂಜೆ: ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 2 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಶ್ರೀ ವಿನಾಯಕ ಶ್ರೀರಾಮ ಭಜನಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಧೀಶ್ಚಂದ್ರ ಹೆಗ್ಡೆ ಕೊಕ್ರಾಡಿ ನೇರವೇರಿಸಿ ಶುಭ ಕೋರಿದರು. ಅಧ್ಯಕ್ಷತೆ ಅಂಡಿಂಜೆ ಯುವಕ‌ ಮಂಡಲದ ಅಧ್ಯಕ್ಷ ಪ್ರಾಣೇಶ್ ಮುಂಡೇವು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಸಂತ ಸಾಲ್ಯಾನ್ ಹಿಂಪ್ಲೊಟ್ಟು, ನಿತಿನ್ ಮುಂಡೇವು ಅಧ್ಯಕ್ಷರು ಗ್ರಾಮ ಪಂಚಾಯತ್ ಅಂಡಿಂಜೆ,
ಗಿರೀಶ್ ಮೂಡುಕೋಡಿ ನ್ಯೂ ಹಲೆಕ್ಕಿ, ರಾಜಶೇಖರ್ ಅಂಡಿಂಜೆ, ಮಹಾಬಲ ನೆಲ್ಲಿಂಗೇರಿ, ಯೋಗೀಶ್ ಕಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳೆಯರಿಗೆ, ಮಕ್ಕಳಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ದೆಗಳು ನಡೆಯಿತು. ಹಲವಾರು ಮಕ್ಕಳು ಕೃಷ್ಣವೇಷ ಸ್ಪರ್ದೆಯಲ್ಲಿ ಭಾಗವಹಿಸಿ ಬಹುಮಾನ ಪಡೆದರು.

ಪ್ರಶಾಂತ್ ಮಂಜುಗಿರಿ ಸ್ವಾಗತಿಸಿ, ಅಶ್ವಿನ್ ಮುಂಡೇವು ವಂದಿಸಿದರು. ದಿವ್ಯ ಪ್ರಶಾಂತ್ ನಿರೂಪಿಸಿದರು.
ಪ್ರವೀಣ್ ನವಜ್ಯೋತಿ, ರಾಜೇಶ್ ಮುಂಡೆವು,ಮಿಥುನ್ ದುಗಣಬೆಟ್ಟು,ಶಶಿ ಹೆಗ್ಡೆ ಹಾಗೂ ಯುವಕ ಮಂಡಲದ ಸದಸ್ಯರು ಸಹಕರಿಸಿದರು.

Related posts

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಸಿನರ್ಜಿ” ವಿಭಾಗ ವಿದ್ಯಾರ್ಥಿ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya

ಪಡಂಗಡಿ: ಕಾರು ಡಿಕ್ಕಿ ಬೈಕ್ ಸವಾರನಿಗೆ ಗಂಭೀರ ಗಾಯ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಘಟನೆ

Suddi Udaya
error: Content is protected !!