25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

ಅಂಡಿಂಜೆ: ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 2 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಶ್ರೀ ವಿನಾಯಕ ಶ್ರೀರಾಮ ಭಜನಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಧೀಶ್ಚಂದ್ರ ಹೆಗ್ಡೆ ಕೊಕ್ರಾಡಿ ನೇರವೇರಿಸಿ ಶುಭ ಕೋರಿದರು. ಅಧ್ಯಕ್ಷತೆ ಅಂಡಿಂಜೆ ಯುವಕ‌ ಮಂಡಲದ ಅಧ್ಯಕ್ಷ ಪ್ರಾಣೇಶ್ ಮುಂಡೇವು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಸಂತ ಸಾಲ್ಯಾನ್ ಹಿಂಪ್ಲೊಟ್ಟು, ನಿತಿನ್ ಮುಂಡೇವು ಅಧ್ಯಕ್ಷರು ಗ್ರಾಮ ಪಂಚಾಯತ್ ಅಂಡಿಂಜೆ,
ಗಿರೀಶ್ ಮೂಡುಕೋಡಿ ನ್ಯೂ ಹಲೆಕ್ಕಿ, ರಾಜಶೇಖರ್ ಅಂಡಿಂಜೆ, ಮಹಾಬಲ ನೆಲ್ಲಿಂಗೇರಿ, ಯೋಗೀಶ್ ಕಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳೆಯರಿಗೆ, ಮಕ್ಕಳಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ದೆಗಳು ನಡೆಯಿತು. ಹಲವಾರು ಮಕ್ಕಳು ಕೃಷ್ಣವೇಷ ಸ್ಪರ್ದೆಯಲ್ಲಿ ಭಾಗವಹಿಸಿ ಬಹುಮಾನ ಪಡೆದರು.

ಪ್ರಶಾಂತ್ ಮಂಜುಗಿರಿ ಸ್ವಾಗತಿಸಿ, ಅಶ್ವಿನ್ ಮುಂಡೇವು ವಂದಿಸಿದರು. ದಿವ್ಯ ಪ್ರಶಾಂತ್ ನಿರೂಪಿಸಿದರು.
ಪ್ರವೀಣ್ ನವಜ್ಯೋತಿ, ರಾಜೇಶ್ ಮುಂಡೆವು,ಮಿಥುನ್ ದುಗಣಬೆಟ್ಟು,ಶಶಿ ಹೆಗ್ಡೆ ಹಾಗೂ ಯುವಕ ಮಂಡಲದ ಸದಸ್ಯರು ಸಹಕರಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಆಶ್ರಯದಲ್ಲಿ 418 ಶಾಲೆಗಳಿಗೆ ರೂ.2.50 ಕೋಟಿ ಮೊತ್ತದ 3472 ಜೊತೆ ಪೀಠೋಪಕರಣ ವಿತರಣೆಗೆ ಡಾ.ಹೆಗ್ಗಡೆ ಚಾಲನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya
error: Content is protected !!