22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ ಮಾತನಾಡಿ ಮನುಷ್ಯ ಸೇರಿ ಜಗತ್ತಿನ ಜೀವ ಜಾಲಗಳು ಕ್ರೀಡೆಯ ಕುರಿತು ತಾಳಿರುವ ಆಸಕ್ತಿ ಮತ್ತು ಉಪಯೋಗವನ್ನು ವಿವರಿಸುತ್ತಾ, ಒಲಂಪಿಕ್ಸ್ ನ್ನಂತಹ ಕ್ರೀಡೆಯಲ್ಲಿ 1900 ರಿಂದ ಇಲ್ಲಿಯವರೆಗೆ ಪಡೆದ ಕ್ರೀಡಾ ಪದಕಗಳ ಕುರಿತು ಹಾಗೂ ಅ ಮೂಲಕ ಭಾರತ ಜಗತ್ತಲ್ಲಿ ಹೇಗೆ ವಿಶ್ವಮಾನ್ಯತೆಯನ್ನು ಪಡೆಯಬಲ್ಲದು ಎಂಬುದನ್ನು ಉಲ್ಲೇಖಿಸಿದರು.

ಕಾಲೇಜಿನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಪ್ರಜ್ವಲ್ ರೈ, ಕೋಶಾಧಿಕಾರಿ ಎಂ.ಕೆ ಕಾಶಿನಾಥ್, ಶೈಕ್ಷಣಿಕ ನಿರ್ದೇಶಕರು ಗಂಗಾಧರ್ ಇ ಮಂಡಗಳಲೆ, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾ ಪ್ರತಿಜ್ಞೆಯನ್ನು ಮಾಡುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Related posts

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ

Suddi Udaya

ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿಮಿ೯ಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಒಳಪಡಿಸಬೇಕು ಒತ್ತಾಯಿಸಿ ಜನಾಗ್ರಹ ಸಭೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಶ್ರಮದಾನ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ಉರುವಾಲು: ಕಾರಿಂಜ ಬಾಯ್ತಾರು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಸಮವಸ್ತ್ರ ವಿತರಣೆ

Suddi Udaya

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya
error: Content is protected !!