24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

ಬಳಂಜ: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವಾಧ್ಯಕ್ಷ, ಮಾಜಿ ತಾ.ಪಂ ಸದಸ್ಯ, ಹಿರಿಯರು, ಸಮಾಜ ಸೇವಕರಾದ ಹೆಚ್. ಧರ್ಣಪ್ಪ ಪೂಜಾರಿಯವರನ್ನು ಸಮಾಜಕ್ಕೆ ಸಲ್ಲಿಸಿದ ಪ್ರಾಮಾಣಿಕ ಸೇವೆಗಾಗಿ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.

ಹೆಚ್. ಧರ್ಣಪ್ಪ ಪೂಜಾರಿಯವರು ಸನ್ಮಾನ ಸ್ವೀಕರಿಸಿ ಮಾತನಾಡಿ ಬದುಕಿನಲ್ಲಿ ಯಾವತ್ತಿಗೂ ನಾವು ಇನ್ನೊಬ್ಬರಿಗೆ ಸಹಾಯ ಮಾಡಬೇಕೆ ವಿನಃ ಕೆಟ್ಟದ್ದನ್ನು ಬಯಕಬಾರದು. ನಾವು ಮಾಡುವ ಒಳ್ಳೆಯ ಕೆಲಸಕ್ಕೆ ದೇವರ ಆಶೀರ್ವಾದ ಸದಾ ಇರುತ್ತದೆ. ಯುವಶಕ್ತಿ ಫ್ರೆಂಡ್ಸ್ ತಂಡ ಸಮಾಜಮುಖಿಯಾಗಿ ಸಮಾಜದಲ್ಲಿ ಉತ್ತಮ ಕೆಲಸ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಸಂತೋಷ್ ಕುಮಾರ್ ಕಾಪಿನಡ್ಕ,ತಿಮ್ಮಪ್ಪ ಪೂಜಾರಿ ತಾರಿಪಡ್ಪು, ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕ ಹೆಚ್. ದೇಜಪ್ಪ ಪೂಜಾರಿ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್‌.ಎಸ್, ಯುವಶಕ್ತಿ ಫ್ರೆಂಡ್ಸ್ ತಂಡದ ಸಂತೋಷ್ ಪಿ ಕೋಟ್ಯಾನ್, ವಿಜಯ ಪೂಜಾರಿ, ಕರುಣಾಕರ ಹೆಗ್ಡೆ,ರಂಜಿತ್ ಪೂಜಾರಿ,ಜಗದೀಶ್ ಪೂಜಾರಿ, ಸಂತೋಷ್ ಕೋಟ್ಯಾನ್, ದಿನೇಶ್ ಪೂಜಾರಿ,ರಕ್ಷಿತ್,ಪ್ರಶಾಂತ್ ಕೋಟ್ಯಾನ್,ಶರತ್ ಅಂಚನ್,ಪ್ರಣಾಮ್ ಶೆಟ್ಟಿ,ಸುಧೀಶ್ ಪೂಜಾರಿ, ಯತೀಶ್ ವೈ,ಯೋಗೀಶ್ ಆರ್, ಪ್ರವೀಣ್ ಡಿ ಕೋಟ್ಯಾನ್, ಸಂಪತ್ ಕೋಟ್ಯಾನ್, ಚಂದ್ರಹಾಸ್ ಬಳಂಜ, ಕಿರಣ್ ಪೂಜಾರಿ, ಪ್ರಥಮ್, ಸಾಯಿ, ಸುಧೀರ್ ಸಾಲಿಯಾನ್,ಮಹೇಶ್ ಕುಲಾಲ್, ಜಯಪ್ರಸಾದ್ ಕೋಟ್ಯಾನ್, ಪ್ರಶಾಂತ್ ಅಂಚನ್, ಸತೀಶ್ ಕೋಟ್ಯಾನ್ ಹಾಗೂ ಅನಸೂಯ, ದೀಪಕ್ ಹೆಚ್.ಡಿ, ಸಂಧ್ಯಾ ಹೆಚ್.ಡಿ, ಅನರ್ಘ್ಯ, ಹೃತಿಕ್ ತಾರಿಪಡ್ಪು ಉಪಸ್ಥಿತರಿದ್ದರು.

Related posts

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Suddi Udaya

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya
error: Content is protected !!