25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

ಬಳಂಜ: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವಾಧ್ಯಕ್ಷ, ಮಾಜಿ ತಾ.ಪಂ ಸದಸ್ಯ, ಹಿರಿಯರು, ಸಮಾಜ ಸೇವಕರಾದ ಹೆಚ್. ಧರ್ಣಪ್ಪ ಪೂಜಾರಿಯವರನ್ನು ಸಮಾಜಕ್ಕೆ ಸಲ್ಲಿಸಿದ ಪ್ರಾಮಾಣಿಕ ಸೇವೆಗಾಗಿ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.

ಹೆಚ್. ಧರ್ಣಪ್ಪ ಪೂಜಾರಿಯವರು ಸನ್ಮಾನ ಸ್ವೀಕರಿಸಿ ಮಾತನಾಡಿ ಬದುಕಿನಲ್ಲಿ ಯಾವತ್ತಿಗೂ ನಾವು ಇನ್ನೊಬ್ಬರಿಗೆ ಸಹಾಯ ಮಾಡಬೇಕೆ ವಿನಃ ಕೆಟ್ಟದ್ದನ್ನು ಬಯಕಬಾರದು. ನಾವು ಮಾಡುವ ಒಳ್ಳೆಯ ಕೆಲಸಕ್ಕೆ ದೇವರ ಆಶೀರ್ವಾದ ಸದಾ ಇರುತ್ತದೆ. ಯುವಶಕ್ತಿ ಫ್ರೆಂಡ್ಸ್ ತಂಡ ಸಮಾಜಮುಖಿಯಾಗಿ ಸಮಾಜದಲ್ಲಿ ಉತ್ತಮ ಕೆಲಸ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಸಂತೋಷ್ ಕುಮಾರ್ ಕಾಪಿನಡ್ಕ,ತಿಮ್ಮಪ್ಪ ಪೂಜಾರಿ ತಾರಿಪಡ್ಪು, ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕ ಹೆಚ್. ದೇಜಪ್ಪ ಪೂಜಾರಿ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್‌.ಎಸ್, ಯುವಶಕ್ತಿ ಫ್ರೆಂಡ್ಸ್ ತಂಡದ ಸಂತೋಷ್ ಪಿ ಕೋಟ್ಯಾನ್, ವಿಜಯ ಪೂಜಾರಿ, ಕರುಣಾಕರ ಹೆಗ್ಡೆ,ರಂಜಿತ್ ಪೂಜಾರಿ,ಜಗದೀಶ್ ಪೂಜಾರಿ, ಸಂತೋಷ್ ಕೋಟ್ಯಾನ್, ದಿನೇಶ್ ಪೂಜಾರಿ,ರಕ್ಷಿತ್,ಪ್ರಶಾಂತ್ ಕೋಟ್ಯಾನ್,ಶರತ್ ಅಂಚನ್,ಪ್ರಣಾಮ್ ಶೆಟ್ಟಿ,ಸುಧೀಶ್ ಪೂಜಾರಿ, ಯತೀಶ್ ವೈ,ಯೋಗೀಶ್ ಆರ್, ಪ್ರವೀಣ್ ಡಿ ಕೋಟ್ಯಾನ್, ಸಂಪತ್ ಕೋಟ್ಯಾನ್, ಚಂದ್ರಹಾಸ್ ಬಳಂಜ, ಕಿರಣ್ ಪೂಜಾರಿ, ಪ್ರಥಮ್, ಸಾಯಿ, ಸುಧೀರ್ ಸಾಲಿಯಾನ್,ಮಹೇಶ್ ಕುಲಾಲ್, ಜಯಪ್ರಸಾದ್ ಕೋಟ್ಯಾನ್, ಪ್ರಶಾಂತ್ ಅಂಚನ್, ಸತೀಶ್ ಕೋಟ್ಯಾನ್ ಹಾಗೂ ಅನಸೂಯ, ದೀಪಕ್ ಹೆಚ್.ಡಿ, ಸಂಧ್ಯಾ ಹೆಚ್.ಡಿ, ಅನರ್ಘ್ಯ, ಹೃತಿಕ್ ತಾರಿಪಡ್ಪು ಉಪಸ್ಥಿತರಿದ್ದರು.

Related posts

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya

ಧರ್ಮಸ್ಥಳ ಸಾಧನಾ ಸಭಾಭವನದಲ್ಲಿ ಶೇ 50 ರಿಯಾಯಿತಿ ದರದಲ್ಲಿ ಬಟ್ಟೆಗಳ ಬೃಹತ್ ಮಾರಾಟ ಮೇಳ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya
error: Content is protected !!