23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

ಬಳಂಜ: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವಾಧ್ಯಕ್ಷ, ಮಾಜಿ ತಾ.ಪಂ ಸದಸ್ಯ, ಹಿರಿಯರು, ಸಮಾಜ ಸೇವಕರಾದ ಹೆಚ್. ಧರ್ಣಪ್ಪ ಪೂಜಾರಿಯವರನ್ನು ಸಮಾಜಕ್ಕೆ ಸಲ್ಲಿಸಿದ ಪ್ರಾಮಾಣಿಕ ಸೇವೆಗಾಗಿ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.

ಹೆಚ್. ಧರ್ಣಪ್ಪ ಪೂಜಾರಿಯವರು ಸನ್ಮಾನ ಸ್ವೀಕರಿಸಿ ಮಾತನಾಡಿ ಬದುಕಿನಲ್ಲಿ ಯಾವತ್ತಿಗೂ ನಾವು ಇನ್ನೊಬ್ಬರಿಗೆ ಸಹಾಯ ಮಾಡಬೇಕೆ ವಿನಃ ಕೆಟ್ಟದ್ದನ್ನು ಬಯಕಬಾರದು. ನಾವು ಮಾಡುವ ಒಳ್ಳೆಯ ಕೆಲಸಕ್ಕೆ ದೇವರ ಆಶೀರ್ವಾದ ಸದಾ ಇರುತ್ತದೆ. ಯುವಶಕ್ತಿ ಫ್ರೆಂಡ್ಸ್ ತಂಡ ಸಮಾಜಮುಖಿಯಾಗಿ ಸಮಾಜದಲ್ಲಿ ಉತ್ತಮ ಕೆಲಸ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಸಂತೋಷ್ ಕುಮಾರ್ ಕಾಪಿನಡ್ಕ,ತಿಮ್ಮಪ್ಪ ಪೂಜಾರಿ ತಾರಿಪಡ್ಪು, ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕ ಹೆಚ್. ದೇಜಪ್ಪ ಪೂಜಾರಿ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್‌.ಎಸ್, ಯುವಶಕ್ತಿ ಫ್ರೆಂಡ್ಸ್ ತಂಡದ ಸಂತೋಷ್ ಪಿ ಕೋಟ್ಯಾನ್, ವಿಜಯ ಪೂಜಾರಿ, ಕರುಣಾಕರ ಹೆಗ್ಡೆ,ರಂಜಿತ್ ಪೂಜಾರಿ,ಜಗದೀಶ್ ಪೂಜಾರಿ, ಸಂತೋಷ್ ಕೋಟ್ಯಾನ್, ದಿನೇಶ್ ಪೂಜಾರಿ,ರಕ್ಷಿತ್,ಪ್ರಶಾಂತ್ ಕೋಟ್ಯಾನ್,ಶರತ್ ಅಂಚನ್,ಪ್ರಣಾಮ್ ಶೆಟ್ಟಿ,ಸುಧೀಶ್ ಪೂಜಾರಿ, ಯತೀಶ್ ವೈ,ಯೋಗೀಶ್ ಆರ್, ಪ್ರವೀಣ್ ಡಿ ಕೋಟ್ಯಾನ್, ಸಂಪತ್ ಕೋಟ್ಯಾನ್, ಚಂದ್ರಹಾಸ್ ಬಳಂಜ, ಕಿರಣ್ ಪೂಜಾರಿ, ಪ್ರಥಮ್, ಸಾಯಿ, ಸುಧೀರ್ ಸಾಲಿಯಾನ್,ಮಹೇಶ್ ಕುಲಾಲ್, ಜಯಪ್ರಸಾದ್ ಕೋಟ್ಯಾನ್, ಪ್ರಶಾಂತ್ ಅಂಚನ್, ಸತೀಶ್ ಕೋಟ್ಯಾನ್ ಹಾಗೂ ಅನಸೂಯ, ದೀಪಕ್ ಹೆಚ್.ಡಿ, ಸಂಧ್ಯಾ ಹೆಚ್.ಡಿ, ಅನರ್ಘ್ಯ, ಹೃತಿಕ್ ತಾರಿಪಡ್ಪು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅಕ್ಕ ಕೆಫೆಗೆ ಭೇಟಿ : ಗುಣಮಟ್ಟದ ಊಟಕ್ಕೆ ಮೆಚ್ಚುಗೆ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!