23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

ಬೆಳ್ತಂಗಡಿ: ಜೀವನದ ನೆರಳಾಗಿರುವ ಧರ್ಮಸ್ಥಳ ಯೋಜನೆಯ ಬಗ್ಗೆ ಸದಾಕಾಲ ಕೃತಜ್ಞತಾ ಭಾವ ಹೊಂದಿರಬೇಕು ಎಂದು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರರ ಶಿವಪ್ರಸಾದ ಅಜಿಲ ಹೇಳಿದರು.

ಅವರು ಪಿಲ್ಯ ಸರಕಾರಿ ಉ.ಪ್ರಾ. ಶಾಲೆಯಲ್ಲಿ ಸೆ.1 ರಂದು ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿದರು.


ಯೋಜನೆಯಿಂದಾಗಿ ಇಂದು ಸ್ವಾವಲಂಬಿ ಜೀವನ ನಡೆಸುವಂತಾಗಿದೆ. ಸಹಾಯ‌ ಪಡೆದರೆ ಸಾಲದು ಅದರ ಸ್ಮರಣೆಯೂ ಅಗತ್ಯ ಎಂದ ಅವರು ತಮ್ಮಲ್ಲಿ ಖಾಲಿ ಜಾಗ ಇದ್ದಲ್ಲಿ ಕೃಷಿಯನ್ನು ವಿಸ್ತರಿಸುವ, ಅದರಲ್ಲೂ ಪರಿಪೂರ್ಣಕೃಷಿಯತ್ತ ಎಲ್ಲರೂ ಗಮನಹರಿಸುವ ಅಗತ್ಯತೆಯನ್ನು ವಿವರಿಸಿದರು.


ಯೋಜನೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ ಅವರು, ತನ್ನ ಪ್ರಗತಿಗೆ ಇನ್ನೊಬ್ಬರ ಸಹಾಯಪಡೆದು ಉನ್ನತಿಯಾಗುವುದೇ ಪ್ರಗತಿಬಂಧು ಗುಂಪಿನ ಉದ್ದೇಶ. ಸಂಘದಲ್ಲಿ ಸಾಲ ಪಡೆದು ಅದನ್ನು ಯೋಗ್ಯವಾಗಿ ಬಳಸಿಕೊಂಡರೆ ಆತ ಪರೋಕ್ಷಾಗಿ ದುಪ್ಪಟ್ಟು ಉಳಿತಾಯ ಮಾಡಿದಂತೆ. ಯೋಜನೆಯಿಂದಾಗಿ ಮನೆಯ ಒಲೆ ಉರಿದಿದೆ. ಅದನ್ನು ಯೋಜನೆಯ ವಿರುದ್ದ ಬಳಸಬೇಡಿ ಎಂದರು.


ಯೋಜನಾಧಿಕಾರಿ ದಯಾನಂದ ಪೂಜಾರಿ ಅವರು, ಯೋಜನೆಯು ಲೇವಾದೇವಿ ಮಾಡುವುದಿಲ್ಲ. ಪರೋಕ್ಷವಾಗಿ ದೇಶದ ಅಭಿವೃದ್ದಿಗೆ ಕೆಲಸ ಮಾಡುತ್ತಿದೆ. ಧರ್ಮಾಧಿಕಾರಿ ಡಾl ವೀರೇಂದ್ರ ಹೆಗ್ಗಡೆಯವರ ದೂರದರ್ಶಿತ್ವದ ಯೋಜನೆಯಿಂದಾಗಿ ಸಹಸ್ರಾರು ಮಂದಿ ಸ್ವಾವಲಂಬಿಗಳಾಗಿದ್ದಾರೆ, ಉದ್ಯೋಗಿಗಳಾಗಿದ್ದಾರೆ ಎಂದರು.
ಅಧ್ಯಕ್ಷತೆಯನ್ನು ಪಿಲ್ಯ ಒಕ್ಕೂಟದ ಅಧ್ಯಕ್ಷ ಕೃಷ್ಣರಾಜ ಭಟ್ ವಹಿಸಿದ್ದರು.


ವೇದಿಕೆಯಲ್ಲಿ ಅಳದಂಗಡಿ ಗ್ರಾ.ಪಂ.ಅಧ್ಯಕ್ಷೆ ಸರಸ್ವತಿ, ಸ್ವಾತಿ ಕ್ಲಿನಿಕ್ ‌ನ ಡಾl ಸುಷ್ಮಾ ಎಸ್. ಡೋಂಗ್ರೆ, ಜನಜಾಗೃತಿ ವಲಯಾಧ್ಯಕ್ಷ ನಾರಾಯಣ ಸಾಲ್ಯಾನ್, ಪಿಲ್ಯ ಹಾಗೂ ಕುದ್ಯಾಡಿ ಒಕ್ಕೂಟದ ನೂತನ ಅಧ್ಯಕ್ಷರುಗಳಾದ ಶೈಲೇಶ್ ಮತ್ತು ಭಾರತಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.


ನಾಟಿ ವೈದ್ಯ ಬೇಬಿ ಪೂಜಾರಿ ಪುಣ್ಕೆತ್ಯಾರು ಅವರನ್ನು ಸಮ್ಮಾನಿಸಲಾಯಿತು. 30 ವರ್ಷಗಳಾದ ಸ್ವ- ಸಹಾಯ ಸಂಘಗಳನ್ನು ಗುರುತಿಸಲಾಯಿತು. ಹಿರಿಯ ಸದಸ್ಯರುಗಳನ್ನು ಸಮ್ಮಾನಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ರೀಟಾ ಇಸಬೆಲ್ಲ ಪಿಂಟೋ ಅವರು ಸ್ವಚ್ಛತಾ ಪ್ರತಿಜ್ಞೆ ಬೋಧಿಸಿದರು.
ಅಳದಂಗಡಿ ವಲಯ ಮೇಲ್ವಿಚಾರಕಿ ಸುಮಂಗಳ ಸ್ವಾಗತಿಸಿದರು. ಸೇವಾಪ್ರತಿನಿಧಿ ಹರಿಣಾಕ್ಷಿ ಲತೀಶ್ ವರದಿ ಮಂಡಿಸಿದರು. ಕಾವ್ಯ ವಂದಿಸಿದರು. ಶೈಲೇಶ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69 ಫಲಿತಾಂಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!