April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬೆಳಾಲು : ಮೈತ್ರಿ ಯುವಕ ಮಂಡಲ ಬೆಳಾಲು ಇದರ ಆಶ್ರಯದಲ್ಲಿ 20ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಂಘದ ವಠಾರದಲ್ಲಿ ಸೆ 01 ರಂದು ನಡೆಯಿತು.

ನಿವೃತ್ತ ಜಲಾನಯನ ಅಧಿಕಾರಿ ನಾರಾಯಣ ಸುವರ್ಣ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಯುವಕ ಮಂಡಲದ ಸಮಾಜಮುಖಿ ಸಾಮಾಜಿಕ ಕೆಲಸ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬೆಳಾಲು ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಚಿದಾನಂದ ಕೆ ಹಾಗೂ ಬೆಳಾಲು ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನ ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ ಉಪ್ಪಾರು ಭಾಗವಹಿಸಿ ಶುಭ ಹಾರೈಸಿದರು.

ಮೈತ್ರಿ ಯುವಕ ಮಂಡಲ ಗೌರವಾಧ್ಯಕ್ಷರಾದ ರಾಜೇಶ್ ಪಾರಳ, ಅಧ್ಯಕ್ಷರಾದ ನಿತಿನ್ ಮೋನಿಶ್, ಕಾರ್ಯದರ್ಶಿ ವಿಘ್ನೇಶ್ ಹಾಗೂ ಗೌರವ ಸಲಹೆಗಾರರು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.


ಮುದ್ದು ಕೃಷ್ಣ ರಾಧೆ ವೇಷ ಎಲ್ಲರ ಮನಸೊರೆಗೊಂಡಿತು. ಗೌರವ ಸಲಹೆಗಾರರು ನೋಟರಿ ವಕೀಲರಾದ ಶ್ರೀನಿವಾಸ್ ಗೌಡ, ಅಧ್ಯಾಪಕ ಭರತ್ ಕಾರ್ಯಕ್ರಮ ನಿರ್ವಹಿಸಿದರು, ಸ್ವಾತಿ ಪ್ರಾರ್ಥನೆ ಸಲ್ಲಿಸಿ, ನಿತಿನ್ ಮೋನಿಶ್ ಸ್ವಾಗತಿಸಿ, ವಿಘ್ನೇಶ್ ಧನ್ಯವಾದವಿತ್ತರು.

Related posts

ವರದಕ್ಷಿಣೆ ಕಿರುಕುಳಕ್ಕೆ ಮಲವಂತಿಗೆ ಗ್ರಾಮದ ವಿವಾಹಿತೆ ಬಲಿ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya
error: Content is protected !!