September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬೆಳಾಲು : ಮೈತ್ರಿ ಯುವಕ ಮಂಡಲ ಬೆಳಾಲು ಇದರ ಆಶ್ರಯದಲ್ಲಿ 20ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಂಘದ ವಠಾರದಲ್ಲಿ ಸೆ 01 ರಂದು ನಡೆಯಿತು.

ನಿವೃತ್ತ ಜಲಾನಯನ ಅಧಿಕಾರಿ ನಾರಾಯಣ ಸುವರ್ಣ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಯುವಕ ಮಂಡಲದ ಸಮಾಜಮುಖಿ ಸಾಮಾಜಿಕ ಕೆಲಸ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬೆಳಾಲು ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಚಿದಾನಂದ ಕೆ ಹಾಗೂ ಬೆಳಾಲು ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನ ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ ಉಪ್ಪಾರು ಭಾಗವಹಿಸಿ ಶುಭ ಹಾರೈಸಿದರು.

ಮೈತ್ರಿ ಯುವಕ ಮಂಡಲ ಗೌರವಾಧ್ಯಕ್ಷರಾದ ರಾಜೇಶ್ ಪಾರಳ, ಅಧ್ಯಕ್ಷರಾದ ನಿತಿನ್ ಮೋನಿಶ್, ಕಾರ್ಯದರ್ಶಿ ವಿಘ್ನೇಶ್ ಹಾಗೂ ಗೌರವ ಸಲಹೆಗಾರರು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.


ಮುದ್ದು ಕೃಷ್ಣ ರಾಧೆ ವೇಷ ಎಲ್ಲರ ಮನಸೊರೆಗೊಂಡಿತು. ಗೌರವ ಸಲಹೆಗಾರರು ನೋಟರಿ ವಕೀಲರಾದ ಶ್ರೀನಿವಾಸ್ ಗೌಡ, ಅಧ್ಯಾಪಕ ಭರತ್ ಕಾರ್ಯಕ್ರಮ ನಿರ್ವಹಿಸಿದರು, ಸ್ವಾತಿ ಪ್ರಾರ್ಥನೆ ಸಲ್ಲಿಸಿ, ನಿತಿನ್ ಮೋನಿಶ್ ಸ್ವಾಗತಿಸಿ, ವಿಘ್ನೇಶ್ ಧನ್ಯವಾದವಿತ್ತರು.

Related posts

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅಭಿನಂದನಾ ಸಮಾರಂಭ

Suddi Udaya

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya
error: Content is protected !!