26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆ ಸೆ 1ರಂದು ಬೆಳ್ತಂಗಡಿ ಸಿ ವಿ ಸಿ ಮಿನಿ ಹಾಲ್ ನಲ್ಲಿ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿಯ ಸದಸ್ಯರಾದ ಜಯಾನಂದ ಗೌಡ ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಅವರನ್ನು ಸಭೆಯಲ್ಲಿ ಗೌರವಿಸಲಾಯಿತು. ಸಂಘಟನೆಯ ಚಟುವಟಿಕೆಗಳ ಬಗ್ಗೆ ಹಾಗೂ ಹೆದ್ದಾರಿಯ ಕೆಲಸದ ರಸ್ತೆ ಅಗಲೀಕರಣದ ಸಂದರ್ಭದಲ್ಲಿ ವರ್ತಕರಿಗೆ ಆಗುವಂತಹ ತೊಂದರೆಗಳನ್ನು ಸಂಬಂಧ ಪಟ್ಟ ಇಲಾಖೆಯ ಗಮನಕ್ಕೆ ತಂದು ಸರಿಪಡಿಸುವ ಬಗ್ಗೆ ಚರ್ಚಿಸಲಾಯಿತು. ಮುಂದಿನ 2 ವರ್ಷದ ಅವಧಿಗೆ ನೂತನ ಪಧಾದಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ರೋನಾಲ್ಡ್ ಲೋಬೊ, ಪ್ರಧಾನ ಕಾರ್ಯದರ್ಶಿಯಾಗಿ ಲ್ಯಾನ್ಸಿ ಎ ಪಿರೇರಾ, ಕೋಶಾಧಿಕಾರಿಯಾಗಿ ಸುನೀಲ್ ಶೆಣೈ, ಉಪಾಧ್ಯಕ್ಷರಾಗಿ ಶಶಿಧರ ಪೈ ಆಯ್ಕೆಯಾದರು. ಹಾಗೂ 30 ಮಂದಿ ಸದಸ್ಯರನ್ನು ಆಡಳಿತ ಮಂಡಳಿಗೆ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

ಪ್ರಧಾನ ಕಾರ್ಯದರ್ಶಿ ರೋನಾಲ್ಡ್ ಲೋಬೊ ವರದಿ ಮಂಡಿಸಿದರು. ಕೋಶಾಧಿಕಾರಿ ಸುನೀಲ್ ಶೆಣೈ ಲೆಕ್ಕ ಪತ್ರ ಮಂಡಿಸಿದರು. ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಜತೆ ಕಾರ್ಯದರ್ಶಿ ಯಶವಂತ ಪಟವರ್ಧನ್ ಮಹಾಸಭೆಯ ನೋಟಿಸು ಓದಿ ದಾಖಲಿಸಿದರು. ಸುಶೀಲಾ ಹೆಗ್ಡೆ ಪ್ರಾರ್ಥನೆ ಗೈದರು. ಲ್ಯಾನ್ಸಿ ಎ ಪಿರೇರಾ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪಾರೆಂಕಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!