38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಕೋಣೆಗಳ ಮೇಲ್ಛಾವಣಿ ಸೆ.1 ರಂದು ರಾತ್ರಿ ಸುರಿದ ಭಾರಿ ಮಳೆಗೆ ಕುಸಿದಿದ್ದು ಇದರ ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರವರಿಗೆ ಶಾಲಾ ಅಧ್ಯಕ್ಷರು, ಮುಖ್ಯೋಪಾಧ್ಯಾಯರು ಮನವಿಯನ್ನು ಸಲ್ಲಿಸಿದರು.

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯು 1951 ರಲ್ಲಿ ಸ್ಥಾಪನೆಯಾಗಿದ್ದು 2025-26 ನೇ ಸಾಲಿಗೆ 75 ವರ್ಷಗಳು ಪೂರೈಸಿರುತ್ತದೆ. ಪ್ರಸುತ್ತ ಶೈಕ್ಷಣಿಕ ವರ್ಷದಲ್ಲಿ 162 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಶಾಲೆಯ 4 ತರಗತಿಗಳನ್ನು ನಡೆಸುತ್ತಿರುವ ತರಗತಿ ಕೋಣೆಗಳ ಛಾವಣಿ ಸೆ.1 ರಂದು ರಾತ್ರಿ ಕುಸಿದಿರುತ್ತದೆ. ಕುಸಿದಿರುವ ತರಗತಿ ಕೋಣೆಗಳಲ್ಲಿ ತರಗತಿಗಳನ್ನು ನಡೆಸಲು ಅಸಾಧ್ಯವಾಗಿರುತ್ತದೆ. ಆದುದರಿಂದ ಸದ್ರಿ ಶಾಲೆಯ 4 ತರಗತಿ ಕೋಣೆಗಳ ಛಾವಣಿ ದುರಸ್ತಿ ಮಾಡಬೇಕಾಗಿರುವುದರಿಂದ ಅದಕ್ಕೆ ಬೇಕಾಗಿರುವ ಅನುದಾನವನ್ನು ಮಂಜೂರುಗೊಳಿಸಬೇಕಾಗಿ ವಿನಂತಿಸುತ್ತಿದ್ದೇವೆ. ಅಲ್ಲದೆ ಸದ್ರಿ ಶಾಲೆಗೆ 4 ಹೊಸ ತರಗತಿ ಕೋಣೆಗಳ ಅವಶ್ಯಕತೆ ಇರುವುದರಿಂದ ಮಂಜೂರುಗೊಳಿಸಬೇಕಾಗಿ ಸತೀಶ್ ಕಾಶಿಪಟ್ಣ ವಿನಂತಿಸಿದ್ದಾರೆ.

Related posts

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ಮಡಂತ್ಯಾರು: ಸ್ವಚ್ಛತಾ ಕಾರ್ಯ ನಡೆಯುವ ವೇಳೆ ಮಾರುತಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ ಪಂಚಾಯತ್ ನಿಂದ ರೂ. 5 ಸಾವಿರ ದಂಡ

Suddi Udaya

ಎಪಿಎಂಸಿ ನಿವೃತ್ತ ಕಾರ್ಯದರ್ಶಿ ವೆಂಕಪ್ಪ ಗೌಡ ಕೈಯಾಡಿ ನಿಧನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಆಯ್ಕೆ

Suddi Udaya
error: Content is protected !!