July 23, 2026
Uncategorized

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಕೋಣೆಗಳ ಮೇಲ್ಛಾವಣಿ ಸೆ.1 ರಂದು ರಾತ್ರಿ ಸುರಿದ ಭಾರಿ ಮಳೆಗೆ ಕುಸಿದಿದ್ದು ಇದರ ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರವರಿಗೆ ಶಾಲಾ ಅಧ್ಯಕ್ಷರು, ಮುಖ್ಯೋಪಾಧ್ಯಾಯರು ಮನವಿಯನ್ನು ಸಲ್ಲಿಸಿದರು.

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯು 1951 ರಲ್ಲಿ ಸ್ಥಾಪನೆಯಾಗಿದ್ದು 2025-26 ನೇ ಸಾಲಿಗೆ 75 ವರ್ಷಗಳು ಪೂರೈಸಿರುತ್ತದೆ. ಪ್ರಸುತ್ತ ಶೈಕ್ಷಣಿಕ ವರ್ಷದಲ್ಲಿ 162 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಶಾಲೆಯ 4 ತರಗತಿಗಳನ್ನು ನಡೆಸುತ್ತಿರುವ ತರಗತಿ ಕೋಣೆಗಳ ಛಾವಣಿ ಸೆ.1 ರಂದು ರಾತ್ರಿ ಕುಸಿದಿರುತ್ತದೆ. ಕುಸಿದಿರುವ ತರಗತಿ ಕೋಣೆಗಳಲ್ಲಿ ತರಗತಿಗಳನ್ನು ನಡೆಸಲು ಅಸಾಧ್ಯವಾಗಿರುತ್ತದೆ. ಆದುದರಿಂದ ಸದ್ರಿ ಶಾಲೆಯ 4 ತರಗತಿ ಕೋಣೆಗಳ ಛಾವಣಿ ದುರಸ್ತಿ ಮಾಡಬೇಕಾಗಿರುವುದರಿಂದ ಅದಕ್ಕೆ ಬೇಕಾಗಿರುವ ಅನುದಾನವನ್ನು ಮಂಜೂರುಗೊಳಿಸಬೇಕಾಗಿ ವಿನಂತಿಸುತ್ತಿದ್ದೇವೆ. ಅಲ್ಲದೆ ಸದ್ರಿ ಶಾಲೆಗೆ 4 ಹೊಸ ತರಗತಿ ಕೋಣೆಗಳ ಅವಶ್ಯಕತೆ ಇರುವುದರಿಂದ ಮಂಜೂರುಗೊಳಿಸಬೇಕಾಗಿ ಸತೀಶ್ ಕಾಶಿಪಟ್ಣ ವಿನಂತಿಸಿದ್ದಾರೆ.

Related posts

ಕೆಪಿಸಿಸಿ ಇಂಟಕ್ ನ ರಾಜ್ಯಾಧ್ಯಕ್ಷ ಲಕ್ಷ್ಮಿವೆಂಕಟೇಶ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಮೇ 15: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿದೈವಸ್ಥಾನದಲ್ಲಿ ಸಂಕ್ರಮಣ ಪೂಜೆ : ಉಚಿತ ಬರೆಯುವ ಪುಸ್ತಕ ವಿತರಣೆಯ ಅರ್ಜಿ ಫಾರ್ಮ್‌ಗಳ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ಲೋಕಸಭಾ ಚುನಾವಣೆ, ಹಲವು ಮತಗಟ್ಟೆಗಳಿಗೆ ಸಂಪತ್ ಬಿ ಸುವರ್ಣ ಭೇಟಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya
error: Content is protected !!