ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

ಸುಲ್ಕೇರಿಮೊಗ್ರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ, ಸುಲ್ಕೇರಿಮೊಗ್ರು ಇದರ ಆಶ್ರಯದಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 10ನೇ ವರ್ಷದ ಮೊಸರು ಕುಡಿಕೆ ಉತ್ಸವದಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ದಿ| ಬಾಡ ಪೂಜಾರಿ ಇರುವೈಲು ಪಾಣಿಲ ಇವರ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಕಾರ್ಯಕ್ರಮ, ಮತ್ತು ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಪ್ರಥಮವಾಗಿ ಆರಂಭಿಸಿದ ಶ್ರೀಧರ ಪೂಜಾರಿಯವರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಅಸಕ್ತ ಕುಟುಂಬಗಳಿಗೆ ಅಕ್ಕಿ ಹಾಗೂ ಧನಸಹಾಯ ವಿತರಣಾ ಕಾರ್ಯಕ್ರಮವು ಸೆ.1ರಂದು ಜರಗಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸುಲ್ಕೇರಿಮೊಗ್ರು. ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಅಧ್ಯಕ್ಷ ಸತೀಶ್ ದೇವಾಡಿಗ ವಹಿಸಿದ್ದರು. ವೇದಿಕೆಯಲ್ಲಿ ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಸತೀಶ್ಚಂದ್ರ ಸಾಲ್ಯಾನ್ ಇರುವೈಲು ಪಾಣಿಲ,
ಗಣೇಶ್ ನಾರಾಯಣ ಪಂಡಿತ್ ಮೂಡುಕೋಡಿ, ಶ್ರೀಮತಿ ನಮಿತ ಸದಾನಂದ ಪೂಜಾರಿ, ಮಾಳಿಗೆ ಶ್ರೀಮತಿ ವಿಶಾಲಾಕ್ಷಿ, ಬಿ.ಸಿ ರೋಡು. ನಾರಾಯಣ ಗುರು ಸೇವಾ ಸಂಘ ಸುಲ್ಕೇರಿಮೊಗ್ರು ಅಧ್ಯಕ್ಷ ಸಂಕೇತ್ ಬಂಗೇರ, ಸತೀಶ್ ಕುಮಾರ್ ನಮನ ಡಾಬ, ನಾರಾಯಣ ಪೂಜಾರಿ ಪರಂಟ್ಯಾಲ, ಅಳದಂಗಡಿ ಹಾಲು ಉತ್ಪಾದಕರ ಸಂಘ ಉಪಾದ್ಯಕ್ಷ ಅಶೋಕ್ ಉಪಸ್ಥಿತರಿದ್ದರು.

ಸಮೀಕ್ಷಾ ಶಿರ್ಲಾಲು ಕಾರ್ಯಕ್ರಮವನ್ನು ನಿರೂಪಿಸಿ, ನಂದನ್ ಕುಮಾರ್ ಸ್ವಾಗತಿಸಿ, ಸತೀಶ್ ಎಸ್.ಎಂ. ಧನ್ಯವಾದವಿತ್ತರು.

Leave a Comment

error: Content is protected !!