23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

ಅಂಡಿಂಜೆ: ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 2 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಶ್ರೀ ವಿನಾಯಕ ಶ್ರೀರಾಮ ಭಜನಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಧೀಶ್ಚಂದ್ರ ಹೆಗ್ಡೆ ಕೊಕ್ರಾಡಿ ನೇರವೇರಿಸಿ ಶುಭ ಕೋರಿದರು. ಅಧ್ಯಕ್ಷತೆ ಅಂಡಿಂಜೆ ಯುವಕ‌ ಮಂಡಲದ ಅಧ್ಯಕ್ಷ ಪ್ರಾಣೇಶ್ ಮುಂಡೇವು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಸಂತ ಸಾಲ್ಯಾನ್ ಹಿಂಪ್ಲೊಟ್ಟು, ನಿತಿನ್ ಮುಂಡೇವು ಅಧ್ಯಕ್ಷರು ಗ್ರಾಮ ಪಂಚಾಯತ್ ಅಂಡಿಂಜೆ,
ಗಿರೀಶ್ ಮೂಡುಕೋಡಿ ನ್ಯೂ ಹಲೆಕ್ಕಿ, ರಾಜಶೇಖರ್ ಅಂಡಿಂಜೆ, ಮಹಾಬಲ ನೆಲ್ಲಿಂಗೇರಿ, ಯೋಗೀಶ್ ಕಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳೆಯರಿಗೆ, ಮಕ್ಕಳಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ದೆಗಳು ನಡೆಯಿತು. ಹಲವಾರು ಮಕ್ಕಳು ಕೃಷ್ಣವೇಷ ಸ್ಪರ್ದೆಯಲ್ಲಿ ಭಾಗವಹಿಸಿ ಬಹುಮಾನ ಪಡೆದರು.

ಪ್ರಶಾಂತ್ ಮಂಜುಗಿರಿ ಸ್ವಾಗತಿಸಿ, ಅಶ್ವಿನ್ ಮುಂಡೇವು ವಂದಿಸಿದರು. ದಿವ್ಯ ಪ್ರಶಾಂತ್ ನಿರೂಪಿಸಿದರು.
ಪ್ರವೀಣ್ ನವಜ್ಯೋತಿ, ರಾಜೇಶ್ ಮುಂಡೆವು,ಮಿಥುನ್ ದುಗಣಬೆಟ್ಟು,ಶಶಿ ಹೆಗ್ಡೆ ಹಾಗೂ ಯುವಕ ಮಂಡಲದ ಸದಸ್ಯರು ಸಹಕರಿಸಿದರು.

Related posts

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ಬೆಳ್ತಂಗಡಿ : ಹಾ.ಉ.ಸ. ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ

Suddi Udaya
error: Content is protected !!