23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

ಅಂಡಿಂಜೆ: ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 2 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಶ್ರೀ ವಿನಾಯಕ ಶ್ರೀರಾಮ ಭಜನಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಧೀಶ್ಚಂದ್ರ ಹೆಗ್ಡೆ ಕೊಕ್ರಾಡಿ ನೇರವೇರಿಸಿ ಶುಭ ಕೋರಿದರು. ಅಧ್ಯಕ್ಷತೆ ಅಂಡಿಂಜೆ ಯುವಕ‌ ಮಂಡಲದ ಅಧ್ಯಕ್ಷ ಪ್ರಾಣೇಶ್ ಮುಂಡೇವು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಸಂತ ಸಾಲ್ಯಾನ್ ಹಿಂಪ್ಲೊಟ್ಟು, ನಿತಿನ್ ಮುಂಡೇವು ಅಧ್ಯಕ್ಷರು ಗ್ರಾಮ ಪಂಚಾಯತ್ ಅಂಡಿಂಜೆ,
ಗಿರೀಶ್ ಮೂಡುಕೋಡಿ ನ್ಯೂ ಹಲೆಕ್ಕಿ, ರಾಜಶೇಖರ್ ಅಂಡಿಂಜೆ, ಮಹಾಬಲ ನೆಲ್ಲಿಂಗೇರಿ, ಯೋಗೀಶ್ ಕಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳೆಯರಿಗೆ, ಮಕ್ಕಳಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ದೆಗಳು ನಡೆಯಿತು. ಹಲವಾರು ಮಕ್ಕಳು ಕೃಷ್ಣವೇಷ ಸ್ಪರ್ದೆಯಲ್ಲಿ ಭಾಗವಹಿಸಿ ಬಹುಮಾನ ಪಡೆದರು.

ಪ್ರಶಾಂತ್ ಮಂಜುಗಿರಿ ಸ್ವಾಗತಿಸಿ, ಅಶ್ವಿನ್ ಮುಂಡೇವು ವಂದಿಸಿದರು. ದಿವ್ಯ ಪ್ರಶಾಂತ್ ನಿರೂಪಿಸಿದರು.
ಪ್ರವೀಣ್ ನವಜ್ಯೋತಿ, ರಾಜೇಶ್ ಮುಂಡೆವು,ಮಿಥುನ್ ದುಗಣಬೆಟ್ಟು,ಶಶಿ ಹೆಗ್ಡೆ ಹಾಗೂ ಯುವಕ ಮಂಡಲದ ಸದಸ್ಯರು ಸಹಕರಿಸಿದರು.

Related posts

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya
error: Content is protected !!