September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ. 01ರಂದು ನಾರಾವಿ ಧರ್ಮಶ್ರೀ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಸುಧಾಕರ ಭಂಡಾರಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಂಘವು 2023-24ನೇ ವರದಿ ಸಾಲಿನಲ್ಲಿ ರೂ 229.69 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ. 1.03 ಕೋಟಿ ಲಾಭ ಗಳಿಸಿದೆ, ಸದಸ್ಯರಿಗೆ ಶೇ.12%ಡಿವಿಡೆಂಟ್ ಘೋಷಿಸಿದರು.

ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಢಾರಿ ಮಾತನಾಡಿ ಸಂಘದ ಠೇವಣಿ ಹೆಚ್ಚಳ, ಕೇಂದ್ರ ಮತ್ತು ರಾಜ್ಯ ಸರಕಾರದ ಸವಲತ್ತುಗಳು ರೈತ ಸದಸ್ಯರಿಗೆ ಮುಟ್ಟಿಸುವ ಉದ್ದೇಶದಿಂದ ಸಾಮಾನ್ಯ ಸೇವಾ ಕೇಂದ್ರ ತೆರೆಯುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ.ಯೂನಿಯನ್ ಬ್ಯಾಂಕಿನ ಸಹಕಾರದಿಂದ ಆರ್.ಟಿ.ಸಿ,ನೆಪ್ಟ್ ಸೌಲಭ್ಯಗಳನ್ನು ಮಾಡಲಿದ್ದೇವೆ ಎಂದು ಹೇಳಿದರು.

ವೇದಿಕೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ,ವಲಯ ಮೇಲ್ವಿಚಾರಕ ಸಿರಾಜುದ್ದೀನ್, ನಾರಾವಿ ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್,ಸಂಘದ ಉಪಾಧ್ಯಕ್ಷರಾದ ಸದಾನಂದ ಗೌಡ,ನಿರ್ದೇಶಕರಾದ ವಿಠಲ ಪೂಜಾರಿ,ರಾಜೇಂದ್ರ ಕುಮಾರ್,ಜಗದೀಶ್ ಹೆಗ್ಡೆ, ಲಕ್ಷ್ಮಣ ಪೂಜಾರಿ,ಲಿಂಗಪ್ಪ ಮಲೆಕುಡಿಯ,ಹರೀಶ್ ಹೆಗ್ಡೆ,ಪೆರ್ನೆ,ಯಶೋಧ,ಸುಜಲತಾ ಉಪಸ್ಥಿತರಿದ್ದರು.

ಸನ್ಮಾನ: ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ ಅಯ್ಕೆಯಾದ ಕುಶಾಲಪ್ಪ ಗೌಡ ಪೂವಾಜೆ, ಅಳದಂಗಡಿ ಮೆಸ್ಕಾಂ ಇಲಾಖೆಯ ನಾರಾಯಣ,ಮೋಹನ್,ಅಜಯ್,ಅಮೋಘಸಿದ್ದ ನಾಲ್ಕು ಮಂದಿ ಲೈನ್ ಮ್ಯಾನ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ಸುಮಾರು 11 ಮಂದಿ ಸಾಧಕರನ್ನು ಗೌರವಿಸಲಾಯಿತು. ಜೊತೆಗೆ ಪ್ರೌಢ ಶಾಲಾ,ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಸಹಕರಿಸಿದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಶಶಿಕಾಂತ್ ಜೈನ್ ಸ್ವಾಗತಿಸಿ ವಾರ್ಷಿಕ ವರದಿ ಹಾಗೂ ಸಂಘದ ಲೆಕ್ಕಪತ್ರಗಳನ್ನು ಮಂಡಿಸಿದರು.
ಲೆಕ್ಕಿಗರಾದ ವನಿತಾ, ಗುಮಾಸ್ತರಾದ ಶೇಖರ ಕೆ, ಮಲ್ಲಿಕಾ, ಶ್ರೇಯಾಂಸ ಕುಮಾರ್, ಅಶೋಕ ಹಾಗೂ ಸಿಬ್ಬಂದಿಗಳು ಸಹಕರಿಸಿದರು. ಕಂದಾಯ ಇಲಾಖೆಯ ಇಲಾಖಾಧಿಕಾರಿ ಮಾಹಿತಿ ನೀಡಿದರು.

Related posts

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಎಕ್ಸೆಲ್ ನಲ್ಲಿ ಮಾರ್ಚ್ 18 ರಿಂದ ನೀಟ್, ಜೆಇಇ , ಸಿಇಟಿ ಕ್ರ್ಯಾಶ್ ಕೋರ್ಸ್

Suddi Udaya

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

Suddi Udaya
error: Content is protected !!