September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

ಪುದುವೆಟ್ಟು : ಜೈನ ಧರ್ಮವು ಜಗತ್ತಿನ ಅತ್ಯಂತ ಪುರಾತನ ಧರ್ಮಗಳಲ್ಲಿ ಒಂದು ಜೈನ ಧರ್ಮದ ತತ್ವ ಸಿದ್ಧಾಂತಗಳು ವೈಜ್ಞಾನಿಕ ಹಿನ್ನೆಲೆಯಲ್ಲಿದೆ ಜೈನ ಧರ್ಮೀಯರಲ್ಲಿ ಜೈನ ಧರ್ಮದ ಪ್ರಜ್ಞೆ ಉಳಿಸಿ ಬೆಳೆಸುವಲ್ಲಿ ಜಿನಚೈತ್ಯಾಲಯಗಳು ಪೂರಕ ಮತ್ತು ಪ್ರೇರಕ ಅಂತೆಯೇ ಪುದುವೆಟ್ಟು ಗ್ರಾಮದ 600 ವರ್ಷಗಳ ಪುರಾತನ ಇತಿಹಾಸ ಹೊಂದಿರುವ ಭ| 1008 ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯು ಪಾಳುಬಿದ್ದಿತ್ತು ಈದೀಗ ಈ ಸೀಮೆಯ ಜೈನ ಗುರುಗಳಾದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರು ಶ್ರೀ ಜೈನ ಮಠ ಕಾರ್ಕಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ದಿವ್ಯ ಮಾರ್ಗದರ್ಶನ ಮತ್ತು ಆಶೀರ್ವಾದದೊಂದಿಗೆ ಮತ್ತು ಬಸದಿಗೆ ಸಂಬಂಧಪಟ್ಟ ಎಲ್ಲಾ ಮನೆತನಗಳು ಸೇರಿಕೊಂಡು ಜೀರ್ಣೋದ್ಧಾರ ನಡೆಸಲು ತೀರ್ಮಾನಿಸಿದ್ದು ಇದರ ಶಿಲಾನ್ಯಾಸ ಸಮಾರಂಭ ಆ.28 ರಂದು ಗುರುಗಳಾದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರು ಶ್ರೀ ಜೈನ ಮಠ ಕಾರ್ಕಳ ಇವರ ದಿವ್ಯ ಹಸ್ತದಿಂದ ಶಿಲಾನ್ಯಾಸ ಮತ್ತು ವಾಸ್ತು ತಜ್ಞ ಪಾದೂರು ಸುದರ್ಶನ್ ಇಂದ್ರ ಇವರ ಮಾರ್ಗದರ್ಶನದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭದಲ್ಲಿ ನಿಡ್ವಾಳ ಬಸದಿಗೆ ಸೇರಿರುವ ಎಲ್ಲಾ ಊರ ಪರವೂರ ಶ್ರಾವಕ ಶ್ರಾವಕೀಯರು ಭಾಗವಹಿಸಿದ್ದರು

Related posts

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಬಂಗಾಡಿಯ ವಸಂತ ಗೌಡರವರ ಚಿಕಿತ್ಸೆಗೆ ನೆರವಾಗಿ

Suddi Udaya

ಗ್ರಾಮೀಣ ಭಾಗದ ಮನ್‌‌ಶರ್ ಕಾಲೇಜ್ ನ ರಾಜ್ಯ ಮಟ್ಟದ ಸಾಧನೆ ಪ್ರಶಂಶನೀಯ; ವಿಧಾನ ಸಭಾಪತಿ ಯು. ಟಿ. ಖಾದರ್

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya
error: Content is protected !!