25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬೆಳಾಲು : ಮೈತ್ರಿ ಯುವಕ ಮಂಡಲ ಬೆಳಾಲು ಇದರ ಆಶ್ರಯದಲ್ಲಿ 20ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಂಘದ ವಠಾರದಲ್ಲಿ ಸೆ 01 ರಂದು ನಡೆಯಿತು.

ನಿವೃತ್ತ ಜಲಾನಯನ ಅಧಿಕಾರಿ ನಾರಾಯಣ ಸುವರ್ಣ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಯುವಕ ಮಂಡಲದ ಸಮಾಜಮುಖಿ ಸಾಮಾಜಿಕ ಕೆಲಸ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬೆಳಾಲು ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಚಿದಾನಂದ ಕೆ ಹಾಗೂ ಬೆಳಾಲು ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನ ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ ಉಪ್ಪಾರು ಭಾಗವಹಿಸಿ ಶುಭ ಹಾರೈಸಿದರು.

ಮೈತ್ರಿ ಯುವಕ ಮಂಡಲ ಗೌರವಾಧ್ಯಕ್ಷರಾದ ರಾಜೇಶ್ ಪಾರಳ, ಅಧ್ಯಕ್ಷರಾದ ನಿತಿನ್ ಮೋನಿಶ್, ಕಾರ್ಯದರ್ಶಿ ವಿಘ್ನೇಶ್ ಹಾಗೂ ಗೌರವ ಸಲಹೆಗಾರರು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.


ಮುದ್ದು ಕೃಷ್ಣ ರಾಧೆ ವೇಷ ಎಲ್ಲರ ಮನಸೊರೆಗೊಂಡಿತು. ಗೌರವ ಸಲಹೆಗಾರರು ನೋಟರಿ ವಕೀಲರಾದ ಶ್ರೀನಿವಾಸ್ ಗೌಡ, ಅಧ್ಯಾಪಕ ಭರತ್ ಕಾರ್ಯಕ್ರಮ ನಿರ್ವಹಿಸಿದರು, ಸ್ವಾತಿ ಪ್ರಾರ್ಥನೆ ಸಲ್ಲಿಸಿ, ನಿತಿನ್ ಮೋನಿಶ್ ಸ್ವಾಗತಿಸಿ, ವಿಘ್ನೇಶ್ ಧನ್ಯವಾದವಿತ್ತರು.

Related posts

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪತ್ತೆಗೆ ಮನವಿ

Suddi Udaya
error: Content is protected !!