25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶ್ರೀಮತಿ ಶೈಲಜಾ ಎ.ಎನ್. ರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ವಿವಿಧ ಕಚೇರಿಗಳಲ್ಲಿ ಒಟ್ಟು 30 ವರ್ಷ 9 ತಿಂಗಳು 11 ದಿನಗಳ ಪರ್ಯಂತ ಸೇವೆ ಸಲ್ಲಿಸಿ ಆ.31ರಂದು ಸ್ವಯಂ ನಿವೃತ್ತಿಯನ್ನು ಪಡೆದ ಶ್ರೀಮತಿ ಶೈಲಜಾ ಎ.ಎನ್, ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ, ಇವರನ್ನು ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಬೆಳ್ತಂಗಡಿಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಗೌರವಿಸಿ, ಶ್ರೀಮತಿ ಶೈಲಜಾ ಇವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಜೀವ ನಾಯ್ಕ್ ಉಜಿರೆ, ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್, ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಕುಮಾರ್, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಖಜಾನೆ ಇಲಾಖೆ ಬೆಳ್ತಂಗಡಿಯ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು, ಅಳದಂಗಡಿ ಎಫ್.ಪಿ.ಒ ಅಧ್ಯಕ್ಷ ಹರಿದಾಸ್, ಶ್ರೀಮತಿ ಸುಕನ್ಯಾ, ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಸುರ್ಯ ಮತ್ತಿತರೆ ಪ್ರಮುಖರು ಭಾಗವಹಿಸಿದ್ದರು.

ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯ ಕೃಷಿ ಅಧಿಕಾರಿ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜು : ‘ ಪ್ರವೇಶಂ’ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya
error: Content is protected !!