27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಕೋಣೆಗಳ ಮೇಲ್ಛಾವಣಿ ಸೆ.1 ರಂದು ರಾತ್ರಿ ಸುರಿದ ಭಾರಿ ಮಳೆಗೆ ಕುಸಿದಿದ್ದು ಇದರ ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರವರಿಗೆ ಶಾಲಾ ಅಧ್ಯಕ್ಷರು, ಮುಖ್ಯೋಪಾಧ್ಯಾಯರು ಮನವಿಯನ್ನು ಸಲ್ಲಿಸಿದರು.

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯು 1951 ರಲ್ಲಿ ಸ್ಥಾಪನೆಯಾಗಿದ್ದು 2025-26 ನೇ ಸಾಲಿಗೆ 75 ವರ್ಷಗಳು ಪೂರೈಸಿರುತ್ತದೆ. ಪ್ರಸುತ್ತ ಶೈಕ್ಷಣಿಕ ವರ್ಷದಲ್ಲಿ 162 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಶಾಲೆಯ 4 ತರಗತಿಗಳನ್ನು ನಡೆಸುತ್ತಿರುವ ತರಗತಿ ಕೋಣೆಗಳ ಛಾವಣಿ ಸೆ.1 ರಂದು ರಾತ್ರಿ ಕುಸಿದಿರುತ್ತದೆ. ಕುಸಿದಿರುವ ತರಗತಿ ಕೋಣೆಗಳಲ್ಲಿ ತರಗತಿಗಳನ್ನು ನಡೆಸಲು ಅಸಾಧ್ಯವಾಗಿರುತ್ತದೆ. ಆದುದರಿಂದ ಸದ್ರಿ ಶಾಲೆಯ 4 ತರಗತಿ ಕೋಣೆಗಳ ಛಾವಣಿ ದುರಸ್ತಿ ಮಾಡಬೇಕಾಗಿರುವುದರಿಂದ ಅದಕ್ಕೆ ಬೇಕಾಗಿರುವ ಅನುದಾನವನ್ನು ಮಂಜೂರುಗೊಳಿಸಬೇಕಾಗಿ ವಿನಂತಿಸುತ್ತಿದ್ದೇವೆ. ಅಲ್ಲದೆ ಸದ್ರಿ ಶಾಲೆಗೆ 4 ಹೊಸ ತರಗತಿ ಕೋಣೆಗಳ ಅವಶ್ಯಕತೆ ಇರುವುದರಿಂದ ಮಂಜೂರುಗೊಳಿಸಬೇಕಾಗಿ ಸತೀಶ್ ಕಾಶಿಪಟ್ಣ ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹತ್ಯಡ್ಕ ನಿವಾಸಿ ಯಮುನಾ ನಿಧನ

Suddi Udaya

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!