July 23, 2026
Uncategorized

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಕೋಣೆಗಳ ಮೇಲ್ಛಾವಣಿ ಸೆ.1 ರಂದು ರಾತ್ರಿ ಸುರಿದ ಭಾರಿ ಮಳೆಗೆ ಕುಸಿದಿದ್ದು ಇದರ ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರವರಿಗೆ ಶಾಲಾ ಅಧ್ಯಕ್ಷರು, ಮುಖ್ಯೋಪಾಧ್ಯಾಯರು ಮನವಿಯನ್ನು ಸಲ್ಲಿಸಿದರು.

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯು 1951 ರಲ್ಲಿ ಸ್ಥಾಪನೆಯಾಗಿದ್ದು 2025-26 ನೇ ಸಾಲಿಗೆ 75 ವರ್ಷಗಳು ಪೂರೈಸಿರುತ್ತದೆ. ಪ್ರಸುತ್ತ ಶೈಕ್ಷಣಿಕ ವರ್ಷದಲ್ಲಿ 162 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಶಾಲೆಯ 4 ತರಗತಿಗಳನ್ನು ನಡೆಸುತ್ತಿರುವ ತರಗತಿ ಕೋಣೆಗಳ ಛಾವಣಿ ಸೆ.1 ರಂದು ರಾತ್ರಿ ಕುಸಿದಿರುತ್ತದೆ. ಕುಸಿದಿರುವ ತರಗತಿ ಕೋಣೆಗಳಲ್ಲಿ ತರಗತಿಗಳನ್ನು ನಡೆಸಲು ಅಸಾಧ್ಯವಾಗಿರುತ್ತದೆ. ಆದುದರಿಂದ ಸದ್ರಿ ಶಾಲೆಯ 4 ತರಗತಿ ಕೋಣೆಗಳ ಛಾವಣಿ ದುರಸ್ತಿ ಮಾಡಬೇಕಾಗಿರುವುದರಿಂದ ಅದಕ್ಕೆ ಬೇಕಾಗಿರುವ ಅನುದಾನವನ್ನು ಮಂಜೂರುಗೊಳಿಸಬೇಕಾಗಿ ವಿನಂತಿಸುತ್ತಿದ್ದೇವೆ. ಅಲ್ಲದೆ ಸದ್ರಿ ಶಾಲೆಗೆ 4 ಹೊಸ ತರಗತಿ ಕೋಣೆಗಳ ಅವಶ್ಯಕತೆ ಇರುವುದರಿಂದ ಮಂಜೂರುಗೊಳಿಸಬೇಕಾಗಿ ಸತೀಶ್ ಕಾಶಿಪಟ್ಣ ವಿನಂತಿಸಿದ್ದಾರೆ.

Related posts

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

Suddi Udaya

ಡಿಕೆ ಶಿವಕುಮಾರ್‌ ಬಣ, ಇದೀಗ ಮತ್ತೆ ಬಹಿರಂಗವಾಗಿ ತಮ್ಮ ನಾಯಕರ ಪರ ಲಾಬಿ ಆರಂಭಿಸಿದೆ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರವೀಣ್ ಬೇಂಗಿಲ ಆಯ್ಕೆ

Suddi Udaya

ಕನ್ಯಾಡಿ: ಬೈಕ್ – ಬಸ್ಸು ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya
error: Content is protected !!