July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

ಮೂಡಬಿದ್ರೆಯ ಕನ್ನಡ ಕಲಾಭವನದಲ್ಲಿ ವಿಶ್ವವಿಖ್ಯಾತ ಶ್ರೀ ಕ್ಷೇತ್ರ ಗೆಜ್ಜೆ ಗಿರಿ ಮಹಾತ್ಮೆಯ ಕರ್ತೃ ನಿತಿನ್ ಕುಮಾರ್ ತೆಂಕಕಾರಂದೂರು ರಚಿಸಿ ನಿರ್ದೇಶಿಸಿದ, ಯೋಗೀಶ್ ರಾವ್ ಚಿಗುರುಪಾದೆ ಪದ್ಯ ರಚನೆಯ ಕುಲ ದೈವೋ ಬ್ರಹ್ಮ ಎಂಬ ನೂತನ ಯಕ್ಷಗಾನ ಪ್ರಸಂಗ ಸಾವಿರಾರು ಕಲಾಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಅಧ್ಯಕ್ಷರಾದ ಶ್ರೀ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭುಜಬಲಿ ಜೈನ್, ಜಾನಪದ ವಿದ್ವಾಂಸ ಶೇಖರ್, ಮೂಡಬಿದ್ರೆ ನಗರಸಭೆ ಸದಸ್ಯರಾದ ಸುರೇಶ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ್, ಗೆಜ್ಜೆ ಗಿರಿ ಕ್ಷೇತ್ರದ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಗುರು ನಾರಾಯಣಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಅಧ್ಯಕ್ಷರಾದ ಜಯ ವಿಕ್ರಮ್, ಬಿಲ್ಲವ ಸಂಘ ಮೂಡಬಿದಿರೆಯ ಅಧ್ಯಕ್ಷ ಸುರೇಶ್ ಕೆ ಪೂಜಾರಿ. ಇರುವೆಯಲು ಬಿಲ್ಲವ ಸಂಘದ ಅಧ್ಯಕ್ಷರಾದ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಕರ ಕುಕ್ಕೆಡಿ, ವೇಣೂರು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್, ವಕೀಲರಾದ ನಾಗೇಶ್ ಶೆಟ್ಟಿ, ಹಾಗೂ ಇತರ ಗಣ್ಯರ ಸಮಕ್ಷದಮದಲ್ಲಿ ಜರಗಿತು. ಯಕ್ಷಗಾನಕ್ಕೆ ಶ್ರಮಿಸಿದ ಹಿರಿಯ ಮತ್ತು ಕಿರಿಯ ಕಲಾವಿದರು ಗಳನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

Related posts

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೈಡ್ರಾ ಫೇಶಿಯಲ್ ಸೆಮಿನಾರ್

Suddi Udaya
error: Content is protected !!