April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ:

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬಿ. ವಿ. ಸೂರ್ಯನಾರಾಯಣ ಭಟ್ ರವರು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ ಮತ್ತು ವಿದ್ಯಾರ್ಥಿಗಳ ಶಾರೀರಿಕ, ಮಾನಸಿಕ ಬೆಳವಣಿಗೆಯು ಅತೀಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಪೂವಾಜೆಯವರು ವಹಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಚಟುವಟಿಕೆಗೆ ಬೇಕಾಗುವ ಸವಲತ್ತುಗಳನ್ನು ಶಾಲೆಯಲ್ಲಿ ಒದಗಿಸಲಾಗುವುದು ಎಂದು ಹೇಳಿದರು. ಅತಿಥಿಗಳಾಗಿ ವಾಣಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ ನೋಟರಿ ಬೆಳ್ತಂಗಡಿ ಹಾಗೂ ಸಂಸ್ಥೆಯ ಆಡಳಿತಾಧಿಕಾರಿಯಾದ ಪ್ರಸಾದ್ ಕುಮಾರ್, 2023-24ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಿವರಾಮ್ ಹೆಗ್ಡೆ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಾಣಿ ವಿದ್ಯಾಸಂಸ್ಥೆಯ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ. ಕೆ ಪ್ರಾಸ್ತಾವಿಕ ಮಾತುಗಳನ್ನಾಡುತ್ತ ಕಳೆದ ಶೈಕ್ಷಣಿಕ ಹಾಗೂ ಶೈಕ್ಷಣಿಕೇತರ ಪ್ರಗತಿಯ ಬಗ್ಗೆ ಮಾಹಿತಿಯನ್ನು ನೀಡಿ, ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ. ಎ ಇವರು ವಂದಿಸಿದರು ಹಾಗೂ ಶಿಕ್ಷಕಿ ಕು. ಹರಿಣಾಕ್ಷಿ. ಎನ್ ನಿರೂಪಿಸಿದರು ಮತ್ತು ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂಧಿಗಳು ಸಹಕರಿಸಿದರು.

Related posts

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಫೆ.7-10: ಶಿಶಿಲ ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!