July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ:

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬಿ. ವಿ. ಸೂರ್ಯನಾರಾಯಣ ಭಟ್ ರವರು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ ಮತ್ತು ವಿದ್ಯಾರ್ಥಿಗಳ ಶಾರೀರಿಕ, ಮಾನಸಿಕ ಬೆಳವಣಿಗೆಯು ಅತೀಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಪೂವಾಜೆಯವರು ವಹಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಚಟುವಟಿಕೆಗೆ ಬೇಕಾಗುವ ಸವಲತ್ತುಗಳನ್ನು ಶಾಲೆಯಲ್ಲಿ ಒದಗಿಸಲಾಗುವುದು ಎಂದು ಹೇಳಿದರು. ಅತಿಥಿಗಳಾಗಿ ವಾಣಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ ನೋಟರಿ ಬೆಳ್ತಂಗಡಿ ಹಾಗೂ ಸಂಸ್ಥೆಯ ಆಡಳಿತಾಧಿಕಾರಿಯಾದ ಪ್ರಸಾದ್ ಕುಮಾರ್, 2023-24ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಿವರಾಮ್ ಹೆಗ್ಡೆ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಾಣಿ ವಿದ್ಯಾಸಂಸ್ಥೆಯ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ. ಕೆ ಪ್ರಾಸ್ತಾವಿಕ ಮಾತುಗಳನ್ನಾಡುತ್ತ ಕಳೆದ ಶೈಕ್ಷಣಿಕ ಹಾಗೂ ಶೈಕ್ಷಣಿಕೇತರ ಪ್ರಗತಿಯ ಬಗ್ಗೆ ಮಾಹಿತಿಯನ್ನು ನೀಡಿ, ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ. ಎ ಇವರು ವಂದಿಸಿದರು ಹಾಗೂ ಶಿಕ್ಷಕಿ ಕು. ಹರಿಣಾಕ್ಷಿ. ಎನ್ ನಿರೂಪಿಸಿದರು ಮತ್ತು ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂಧಿಗಳು ಸಹಕರಿಸಿದರು.

Related posts

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

Suddi Udaya

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya
error: Content is protected !!