ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

ಶಿರ್ಲಾಲು : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಸೆ.3ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಉಷಾ ಎಂ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಶ್ರೀಮತಿ ಹೇಮಾಲತಾ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಪಂಚಾಯತ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಗುವ ಸಹಾಯ ಧನದ ಕುರಿತಾದ ಮಾಹಿತಿಗಳು ಗ್ರಾಮಸ್ಥರಿಗೆ ತಿಳಿದಿಲ್ಲ. ಈ ಬಗ್ಗೆ ಪಂಚಾಯತ್ ವತಿಯಿಂದ ಮಾಹಿತಿಗಳನ್ನು ನೀಡುವ ಕೆಲಸವಾಗಬೇಕು ಎಂದು ಬಾಬು ಎರ್ಮೆತ್ತೋಡಿ ಹೇಳಿದರು.

ಸರಕಾರ ಅಕೇಶಿಯ ಮರಗಳನ್ನು ನೆಡಲು ಅವಕಾಶವಿಲ್ಲ ಎಂದು ಹೇಳಿದೆ. ಹಾಗೂ ಅದನ್ನು ಕಡಿಯುವಂತಹ ಆದೇಶ ಹೊರಡಿಸಿದೆ. ಶಿರ್ಲಾಲು ವಿನಲ್ಲಿ ಕೆಲವೊಂದು ಭಾಗದಲ್ಲಿ ಅಕೇಶಿಯ ಮರಗಳು ಇದ್ದು ಇದರಿಂದ ನೀರಿನ ಸಮಸ್ಯೆಗಳು ಉಂಟಾಗುತ್ತದೆ ಎಂದು ಗ್ರಾಮಸ್ಥರೋರ್ವರು ಅರಣ್ಯ ಇಲಾಖಾಧಿಕಾರಿಗಳಲ್ಲಿ ತಿಳಿಸಿದರು.

ಸಭೆಯಲ್ಲಿ ಉಪಾಧ್ಯಕ್ಷ ಸೋಮನಾಥ ಬಂಗೇರ, ಸದಸ್ಯರಾದ ಶ್ರೀಮತಿ ಮಮತಾ ಜೈನ್, ಮಾಧವ, ಕೊರಗಪ್ಪ, ಶ್ರೀಮತಿ ಗೀತಾ, ಶ್ರೀಮತಿ ಜ್ಯೋತಿ ಪೂಜಾರಿ, ಶ್ರೀಮತಿ ಸುಶೀಲ, ಶ್ರೀಮತಿ ಗೀತಾ, ಪ್ರಕಾಶ್ ಹೆಗ್ಡೆ, ತಾರಾನಾಥ ಗೌಡ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಸುಶೀಲ ಸ್ವಾಗತಿಸಿ, ಅನುಪಾಲನ ವರದಿ ವಾಚಿಸಿದರು. ಪಂ. ಸಿಬ್ಬಂದಿ ಪವಿತಾ ಜಮಾಖರ್ಚು ವಿವರವನ್ನು ಮಂಡಿಸಿದರು.

Related posts

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಕಳಿಯ ಗ್ರಾ.ಪಂ.ನಲ್ಲಿ ಮೆಸ್ಕಾಂನಿಂದ ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ “ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ”

Suddi Udaya

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
error: Content is protected !!