July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

ಶಿರ್ಲಾಲು : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಸೆ.3ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಉಷಾ ಎಂ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಶ್ರೀಮತಿ ಹೇಮಾಲತಾ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.

ಪಂಚಾಯತ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಗುವ ಸಹಾಯ ಧನದ ಕುರಿತಾದ ಮಾಹಿತಿಗಳು ಗ್ರಾಮಸ್ಥರಿಗೆ ತಿಳಿದಿಲ್ಲ. ಈ ಬಗ್ಗೆ ಪಂಚಾಯತ್ ವತಿಯಿಂದ ಮಾಹಿತಿಗಳನ್ನು ನೀಡುವ ಕೆಲಸವಾಗಬೇಕು ಎಂದು ಬಾಬು ಎರ್ಮೆತ್ತೋಡಿ ಹೇಳಿದರು.

ಸರಕಾರ ಅಕೇಶಿಯ ಮರಗಳನ್ನು ನೆಡಲು ಅವಕಾಶವಿಲ್ಲ ಎಂದು ಹೇಳಿದೆ. ಹಾಗೂ ಅದನ್ನು ಕಡಿಯುವಂತಹ ಆದೇಶ ಹೊರಡಿಸಿದೆ. ಶಿರ್ಲಾಲು ವಿನಲ್ಲಿ ಕೆಲವೊಂದು ಭಾಗದಲ್ಲಿ ಅಕೇಶಿಯ ಮರಗಳು ಇದ್ದು ಇದರಿಂದ ನೀರಿನ ಸಮಸ್ಯೆಗಳು ಉಂಟಾಗುತ್ತದೆ ಎಂದು ಗ್ರಾಮಸ್ಥರೋರ್ವರು ಅರಣ್ಯ ಇಲಾಖಾಧಿಕಾರಿಗಳಲ್ಲಿ ತಿಳಿಸಿದರು.

ಸಭೆಯಲ್ಲಿ ಉಪಾಧ್ಯಕ್ಷ ಸೋಮನಾಥ ಬಂಗೇರ, ಸದಸ್ಯರಾದ ಶ್ರೀಮತಿ ಮಮತಾ ಜೈನ್, ಮಾಧವ, ಕೊರಗಪ್ಪ, ಶ್ರೀಮತಿ ಗೀತಾ, ಶ್ರೀಮತಿ ಜ್ಯೋತಿ ಪೂಜಾರಿ, ಶ್ರೀಮತಿ ಸುಶೀಲ, ಶ್ರೀಮತಿ ಗೀತಾ, ಪ್ರಕಾಶ್ ಹೆಗ್ಡೆ, ತಾರಾನಾಥ ಗೌಡ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಸುಶೀಲ ಸ್ವಾಗತಿಸಿ, ಅನುಪಾಲನ ವರದಿ ವಾಚಿಸಿದರು. ಪಂ. ಸಿಬ್ಬಂದಿ ಪವಿತಾ ಜಮಾಖರ್ಚು ವಿವರವನ್ನು ಮಂಡಿಸಿದರು.

Related posts

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!