September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

ಬೆಳ್ತಂಗಡಿ: ಸಾರ್ವಜನಿಕ ಗಣೇಶೋತ್ಸವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಬೆಳ್ತಂಗಡಿಯ ಪೊಲೀಸ್ ಠಾಣೆಯ ಆವರಣದಲ್ಲಿ ಠಾಣೆ ವತಿಯಿಂದ ಗಣೇಶೋತ್ಸವ ಆಯೋಜಕರೊಂದಿಗೆ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶವಾಗಿ ಗಣೇಶೋತ್ಸವದ ಆಚರಣೆ, ಇದರ ಬಗ್ಗೆ ಮಾಹಿತಿಯನ್ನು ನೀಡಲು ಹಿಂದೂ ಜನಜಾಗೃತಿ ಸಮಿತಿಗೆ ಅವಕಾಶವನ್ನು ನೀಡಿದರು. ಸಮಿತಿಯ ಕರುಣಾಕರ ಅಭ್ಯಂಕರವರು ಮಾಹಿತಿಯನ್ನು ನೀಡಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ಗುಲಾಮಗಿರಿಯಿಂದ ಮುಕ್ತರಾಗುವುದು ಹಾಗೂ ನಮ್ಮಲ್ಲಿ ಸಂಘಭಾವ ನಿರ್ಮಾಣವಾಗುವ ಉದ್ದೇಶದಿಂದ ವೈಯಕ್ತಿಕವಾಗಿ ಆಚರಿಸುತ್ತಿದ್ದಂತಹ ಗಣೇಶ ವ್ರತವನ್ನು ಲೋಕಮಾನ್ಯ ತಿಲಕರು ಸಾರ್ವಜನಿಕ ಗಣೇಶೋತ್ಸವವನ್ನಾಗಿ ಆಚರಿಸಿದರು. ಅದು ಯಶಸ್ವಿ ಕೂಡ ಆಯಿತು. ಆದರೆ ಈಗ ಆ ಉದ್ದೇಶವು ಪೂರ್ಣತಹ ಬದಲಾಗಿದೆ. ಈಗ ಮಧ್ಯರಾತ್ರಿಯಲ್ಲಿ ಗಣಪತಿಯ ವಿಸರ್ಜನೆ, ಸಾರ್ವಜನಿಕರಿಗೆ ಕಿರಿಕಿರಿಯಾಗುವಂತಹ ಚಟುವಟಿಕೆ, ಸಾಮಾಜಿಕ ನಾಟಕಗಳು, ಅಶ್ಲೀಲ ಸಿನಿಮಾ ಹಾಡುಗಳು ಹಾಗೂ ಅವುಗಳಿಗೆ ನೃತ್ಯ, ಅಮಲು ಪದಾರ್ಥ ಸೇವನೆ, ಒತ್ತಾಯಪೂರ್ವಕ ವಸೂಲಿ. ಇವು ಎಲ್ಲವೂ ಕೂಡ ಧರ್ಮ ಬಾಹಿರವಾಗಿದೆ. ಗಣಪತಿಯ ಕೃಪೆ ದೊರಕುವ ಬದಲು ಅವಕೃಪೆಯೇ ದೊರಕುತ್ತದೆ.


ಸಾರ್ವಜನಿಕ ಗಣೇಶೋತ್ಸವ ಮಾಡುವ ಉದ್ದೇಶ, ಚಾತುರ್ಮಾಸದಲ್ಲಿ ಯಮದಿಕ್ಕಿನಿಂದ ಹೆಚ್ಚು ಅಸುರಿ ಲಹರಿಗಳು ಬರುತ್ತಿರುತ್ತದೆ. ಇದರಿಂದ ಮನುಷ್ಯನಿಗೆ ನಾನಾ ರೀತಿಯ ಮನೋವಿಕಾರಗಳು, ಕಾಯಿಲೆಗಳು, ಅಪಘಾತಗಳು, ವಿಘ್ನಗಳು ಉಂಟಾಗುತ್ತವೆ. ಇವು ವೈಜ್ಞಾನಿಕ ಸಂಶೋಧನೆಗಳಿಂದಲೂ ದೃಢಪಟ್ಟಿದೆ. ಅದಕ್ಕೋಸ್ಕರ ಈ ಸಮಯದಲ್ಲಿ ಭಗವಂತನ ಉಪಾಸನೆ, ಪೂಜೆ, ವೃತ್ತಗಳು, ಹಬ್ಬಗಳನ್ನು ಹೆಚ್ಚಾಗಿ ಆಚರಣೆ ಮಾಡ್ತಾರೆ. ಇದರಿಂದ ಅಸುರಿ ಶಕ್ತಿಗಳ ಹಲ್ಲೆಗಳಿಂದ ರಕ್ಷಣೆ ದೊರಕುತ್ತದೆ. ಹಾಗೂ ಸಮಾಜದಲ್ಲಿ ಒಂದು ಉತ್ತಮ ವಾತಾವರಣವು ನಿರ್ಮಾಣವಾಗುತ್ತದೆ. ಈ ಉದ್ದೇಶದಿಂದ ಸಾರ್ವಜನಿಕ ಹಬ್ಬಗಳನ್ನು ಆಚರಣೆ ಮಾಡುತ್ತೇವೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಗಣೇಶೋತ್ಸವದಿಂದ ಗಣಪತಿಯ ಚೈತನ್ಯವನ್ನು ಪಡೆಯಲು, ಕೃಪೆಯನ್ನು ಸಂಪಾದಿಸಲು ಯಾವ ರೀತಿ ಆಚರಿಸಬೇಕು ಎಂಬುದನ್ನು ಧರ್ಮಶಾಸ್ತ್ರಗಳು ನಮಗೆ ತಿಳಿಸಿ ಹೇಳಿವೇ. ಧರ್ಮೋ ರಕ್ಷತಿ ರಕ್ಷಿತಹ ಎಂಬಂತೆ ನಾವೆಲ್ಲರೂ ಧರ್ಮಶಾಸ್ತ್ರಗಳು ಹೇಳಿದಂತೆ ಆದರ್ಶ ಗಣೇಶೋತ್ಸವವನ್ನು ಆಚರಿಸುವ, ಧರ್ಮದ ರಕ್ಷಣೆಯನ್ನು ಮಾಡುವ ಹಾಗೂ ಉತ್ತಮ ಸಮಾಜದ ನಿರ್ಮಾಣ ಮಾಡುವ ಎಂದು ಮಾಹಿತಿಯನ್ನು ನೀಡಿದರು.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಗಾಯತ್ರಿ ಪಿ ಅಧಿಕಾರ ಸ್ವೀಕಾರ

Suddi Udaya

ಕಣಿಯೂರು: ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಆಟಿಡೊಂಜಿ ಕೂಟ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya
error: Content is protected !!