25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ವ ಲಯ ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ

ನಡ :ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಸೆ. 3ರಂದು ಬೆಳ್ತಂಗಡಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಸೆ. 3ರಂದು ಬೆಳ್ತಂಗಡಿ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟಯಶಸ್ವಿಯಾಗಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಅಧ್ಯಕ್ಷರಾದ ಜನಾಬ್ ಸಯ್ಯದ್ ಹಬೀಬ್ ರವರು ವಹಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ರೀಯುತ ಸಯ್ಯದ್ ಅಯ್ಯುಬ್ , ಬಂಗಾಡಿ ವಲಯ ಸಂಪನ್ಮೂಲ ವ್ಯಕ್ತಿ ರಮೇಶ್, ಬೆಳ್ತಂಗಡಿ ವಲಯ ಕ್ರೀಡಾ ಸಂಯೋಜಕಿ ಶ್ರೀಮತಿ ಕುಮದಶ್ರೀ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಜನಾಬ್ ಸಯ್ಯದ್ ಹಬೀಬ್ ರವರು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯನಿಯವರು ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಶಾಲಾ ಸಹ ಶಿಕ್ಷಕಿ ಶ್ವೇತಾ ಇವರು ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಂದರ್ ನಾಯ್ಕ್ ಧನ್ಯವಿತರು . ಈ ಕ್ರೀಡಾ ಕೂಟದ ಫಲಿತಾಂಶವಾಗಿ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮುಂಡಾಜೆ ಪ್ರೌಢಶಾಲೆ ಮತ್ತು ದ್ವಿತೀಯ ಸ್ಥಾನವನ್ನು ಸರಕಾರಿ ಪದವಿಪೂರ್ವ ಕಾಲೇಜ್ ಬೆಳ್ತಂಗಡಿ ಇಲ್ಲಿಯ ಪ್ರೌಢಶಾಲಾ ಬಾಲಕರು ಪಡೆದುಕೊಂಡರು. ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸರಕಾರಿ ಪ್ರೌಢಶಾಲೆ ಕೊಯ್ಯೂರು ಮತ್ತು ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ ನಾವೂರು ಪಡೆದುಕೊಂಡಿತು

Related posts

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

Suddi Udaya

ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!