July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

ಕೊಕ್ಕಡ: ಅಂಗಡಿ ಮುಂಭಾಗದ ಜಗಲಿಯಲ್ಲಿ ಕುಳಿತ್ತಿದ್ದ ನನಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಕೊಕ್ಕಡ ಪಿಜಿನಡ್ಕ ನಿವಾಸಿ ಮಂಚ್ಚ ಮುಗೇರ ಅವರು ಸೆ.೧ರಂದು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.


ಸೆ.೦೧ರಂದು ಹಳ್ಳಂಗೇರಿಯ ರಾಮಣ್ಣ ಗೌಡರ ಅಂಗಡಿ ಬಳಿ ಬರುತ್ತಿದ್ದಂತೆ ಮಳೆ ಸುರಿದಿದ್ದು, ಛತ್ರಿ ಇಲ್ಲದ ಕಾರಣ ನಾನು ಅಂಗಡಿಯ ಮುಂಭಾಗದ ಜಗಲಿಯಲ್ಲಿ ಕುಳಿತ್ತಿದ್ದು, ಈ ವೇಳೆ ಬಂದ ರಾಮಣ್ಣ ಗೌಡ ಇಲ್ಲೇಕೆ ಕುಳಿತ್ತಿದ್ದ ಎಂದು ಪ್ರಶ್ನಿಸಿ, “ನೀವು ನಿಮ್ಮ ಜಾತಿಯ ಬುದ್ದಿಯನ್ನು ಬಿಡುವುದಿಲ್ಲ ಎಂದು” ಹೇಳಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆಯ ಬಳಿಕ ಅದೇ ರಸ್ತೆಯಲ್ಲಿ ಕೆಲಸ ಬಿಟ್ಟು ಬರುತ್ತಿದ್ದ ಅವರ ಸೊಸೆ (ಮಗನ ಪತ್ನಿ) ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಬಳಿಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದೂರು ನೀಡಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಮುಗೇರಡ್ಕ ನೇತ್ರಾವತಿ ನದಿಯ ಪಂಪ್ ಹೌಸ್ ಬಳಿ ಬಲೆ ಬಿಟ್ಟು ಮೀನು ಹಿಡಿಯಲು ಹೋದ ಯುವಕ ನೀರು ಪಾಲು: ಶವ ಪತ್ತೆ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya
error: Content is protected !!