25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ ಶಿಪ್-2024ಕ್ಕೆ ಖೇಲೋ ಭಾರತ್ ಯೂತ್ ಗೇಮ್ಸ್ ಫೆಡರೇಶನ್ ಇಂಡಿಯಾ ತಂಡವನ್ನು ಪ್ರತಿನಿಧಿಸಿದ ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನಗಳಿಸಿ ಹೊರ ಹೊಮ್ಮಿದೆ.

ನೇಪಾಳದ ಪೋಖರ ರಂಗಶಾಲಾದಲ್ಲಿ ಆ.31, ಸೆ.1,2ರಂದು ನಡೆದ ಪಂದ್ಯಾಟದಲ್ಲಿ ಭಾಗವಹಿಸಿದ ಪುರುಷ ಮತ್ತು ಮಹಿಳೆಯರ ಖೇಲೋ ಭಾರತ್ ಯೂತ್ ಗೇಮ್ಸ್ ಫೆಡರೇಶನ್ ಇಂಡಿಯಾ ತಂಡ ಪ್ರಥಮ ಸ್ಥಾನಗಳಿಸಿ ಜಯಶಾಲಿಯಾಗಿದೆ.

ಪುರುಷರ ತಂಡದಲ್ಲಿ ವೈಯಕ್ತಿಕ ನೆಲೆಯಲ್ಲಿ ತಂಡದ ನಾಯಕ ಕಣಿಯೂರು ಗ್ರಾಮದ ಕದ್ರಿ ನಿವಾಸಿ ರತ್ನ ಕೆ. ಮತ್ತು ಮಂಜುನಾಥ್ ಗೌಡ ದಂಪತಿಯ ಪುತ್ರ ಯೂನಿತ್ ಕೆ. ಉತ್ತಮ ಅಲ್ ರೌಂಡರ್ ಪ್ರಶಸ್ತಿ ಪಡೆದರು. ಇಳಂತಿಲ ಗ್ರಾಮದ ನೆಲ್ಲಿಪಲ್ಲಿಕೆ ನಿವಾಸಿ ಧನಂಜಯ ಗೌಡ ಮತ್ತು ಭಾರತಿ ದಂಪತಿಯ ಪುತ್ರ ರೋಹಿತ್ ಉತ್ತಮ ಎಸೆತಗಾರ ಪ್ರಶಸ್ತಿ ಮುಡಿಗೇರಿಸಿಕೊಂಡರು. ಮಡಂತ್ಯಾರಿನ ಸೇಬಾಸ್ಟಿನ್ ವೇಗಸ್ ಹಾಗೂ ಲೀನಾ ವೇಗಸ್ ದಂಪತಿಯ ಪುತ್ರ ಶಾನ್ ವೇಗಸ್ ಹಾಗೂ ಅಚ್ಚುತ ಮತ್ತು ಗಿರಿಜಾ ರವರ ಪುತ್ರ ಅವಿನಾಶ್ ಉತ್ತಮ ಪ್ರದರ್ಶನ ನೀಡಿದರು. ಪ್ರಜ್ವಲ್, ಕರಿಯಪ್ಪ, ದಿಕ್ಷೀತ್, ರವಿ ವರ್ಧನ್, ರಕ್ಷಿತ್, ಪೆಮ್ಮೆಯ್ಯ ಹಾಗೂ ದರ್ಶನ್ ತಂಡದಲ್ಲಿದ್ದರು.

ಮಿಂಚಿದ ಮಡಂತ್ಯಾರಿನ ಡಾಫ್ನಿ ವೆರೋನಿಕ: ಮಹಿಳೆಯರ ತಂಡವನ್ನು ಪ್ರತಿನಿಧಿಸಿದ ಮಡಂತ್ಯಾರಿನ ಕ್ಲೋಡ್ ಫ್ರಾನ್ಸಿಸ್ ಮಿಸ್ಕ್ಯುತ್ ಹಾಗೂ ಡಯಾನ ಮಿಸ್ಕ್ಯುತ್ ದಂಪತಿ ಪುತ್ರಿ ಡಾಫಿ ವೆರೋನಿಕ ಉತ್ತಮ ಅಲ್ ರೌಂಡ‌ರ್ ಪ್ರಶಸ್ತಿಗೆ ಭಾಜನರಾದರು. ತಂಡದ ನಾಯಕಿ ಸುಪ್ರಿಯಾ ಎಸ್.ಪಿ. ಉತ್ತಮ ಎಸೆತಗಾರ ಪ್ರಶಸ್ತಿ ಪಡೆದರು. ಇವರು ಬಂಟ್ವಾಳ ತಾಲೂಕಿನ ಕಸಬಾ ಕೆತ್ತಿಮಾರಿನ ನಿವಾಸಿ ಶೀನಾಥ್ ಸಿ. ಹಾಗೂ ಪೂರ್ಣಿಮಾ ದಂಪತಿಯ ಪುತ್ರಿ. ಸಿಂಚನ, ಭೂಮಿಕಾ, ಉಷಾ, ಭವನಾ ಹಾಗೂ ಗಾನಾವಿ ಉತ್ತಮ ಪ್ರದರ್ಶನ ನೀಡಿದರು. ಎರಡು ತಂಡಗಳಿಗೆ ಕೊಡಗಿನ ವೀರಾಜಪೇಟೆಯ ರೈಶಿಂಗ್ ಸ್ಟಾರ್ ಕೋಚಿಂಗ್ ಸೆಂಟರ್‌ನ ಶಿಬಿರದಲ್ಲಿ ತರಬೇತಿ ಪಡೆದಿದ್ದರು.

Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!