25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ ಶಿಪ್-2024ಕ್ಕೆ ಖೇಲೋ ಭಾರತ್ ಯೂತ್ ಗೇಮ್ಸ್ ಫೆಡರೇಶನ್ ಇಂಡಿಯಾ ತಂಡವನ್ನು ಪ್ರತಿನಿಧಿಸಿದ ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನಗಳಿಸಿ ಹೊರ ಹೊಮ್ಮಿದೆ.

ನೇಪಾಳದ ಪೋಖರ ರಂಗಶಾಲಾದಲ್ಲಿ ಆ.31, ಸೆ.1,2ರಂದು ನಡೆದ ಪಂದ್ಯಾಟದಲ್ಲಿ ಭಾಗವಹಿಸಿದ ಪುರುಷ ಮತ್ತು ಮಹಿಳೆಯರ ಖೇಲೋ ಭಾರತ್ ಯೂತ್ ಗೇಮ್ಸ್ ಫೆಡರೇಶನ್ ಇಂಡಿಯಾ ತಂಡ ಪ್ರಥಮ ಸ್ಥಾನಗಳಿಸಿ ಜಯಶಾಲಿಯಾಗಿದೆ.

ಪುರುಷರ ತಂಡದಲ್ಲಿ ವೈಯಕ್ತಿಕ ನೆಲೆಯಲ್ಲಿ ತಂಡದ ನಾಯಕ ಕಣಿಯೂರು ಗ್ರಾಮದ ಕದ್ರಿ ನಿವಾಸಿ ರತ್ನ ಕೆ. ಮತ್ತು ಮಂಜುನಾಥ್ ಗೌಡ ದಂಪತಿಯ ಪುತ್ರ ಯೂನಿತ್ ಕೆ. ಉತ್ತಮ ಅಲ್ ರೌಂಡರ್ ಪ್ರಶಸ್ತಿ ಪಡೆದರು. ಇಳಂತಿಲ ಗ್ರಾಮದ ನೆಲ್ಲಿಪಲ್ಲಿಕೆ ನಿವಾಸಿ ಧನಂಜಯ ಗೌಡ ಮತ್ತು ಭಾರತಿ ದಂಪತಿಯ ಪುತ್ರ ರೋಹಿತ್ ಉತ್ತಮ ಎಸೆತಗಾರ ಪ್ರಶಸ್ತಿ ಮುಡಿಗೇರಿಸಿಕೊಂಡರು. ಮಡಂತ್ಯಾರಿನ ಸೇಬಾಸ್ಟಿನ್ ವೇಗಸ್ ಹಾಗೂ ಲೀನಾ ವೇಗಸ್ ದಂಪತಿಯ ಪುತ್ರ ಶಾನ್ ವೇಗಸ್ ಹಾಗೂ ಅಚ್ಚುತ ಮತ್ತು ಗಿರಿಜಾ ರವರ ಪುತ್ರ ಅವಿನಾಶ್ ಉತ್ತಮ ಪ್ರದರ್ಶನ ನೀಡಿದರು. ಪ್ರಜ್ವಲ್, ಕರಿಯಪ್ಪ, ದಿಕ್ಷೀತ್, ರವಿ ವರ್ಧನ್, ರಕ್ಷಿತ್, ಪೆಮ್ಮೆಯ್ಯ ಹಾಗೂ ದರ್ಶನ್ ತಂಡದಲ್ಲಿದ್ದರು.

ಮಿಂಚಿದ ಮಡಂತ್ಯಾರಿನ ಡಾಫ್ನಿ ವೆರೋನಿಕ: ಮಹಿಳೆಯರ ತಂಡವನ್ನು ಪ್ರತಿನಿಧಿಸಿದ ಮಡಂತ್ಯಾರಿನ ಕ್ಲೋಡ್ ಫ್ರಾನ್ಸಿಸ್ ಮಿಸ್ಕ್ಯುತ್ ಹಾಗೂ ಡಯಾನ ಮಿಸ್ಕ್ಯುತ್ ದಂಪತಿ ಪುತ್ರಿ ಡಾಫಿ ವೆರೋನಿಕ ಉತ್ತಮ ಅಲ್ ರೌಂಡ‌ರ್ ಪ್ರಶಸ್ತಿಗೆ ಭಾಜನರಾದರು. ತಂಡದ ನಾಯಕಿ ಸುಪ್ರಿಯಾ ಎಸ್.ಪಿ. ಉತ್ತಮ ಎಸೆತಗಾರ ಪ್ರಶಸ್ತಿ ಪಡೆದರು. ಇವರು ಬಂಟ್ವಾಳ ತಾಲೂಕಿನ ಕಸಬಾ ಕೆತ್ತಿಮಾರಿನ ನಿವಾಸಿ ಶೀನಾಥ್ ಸಿ. ಹಾಗೂ ಪೂರ್ಣಿಮಾ ದಂಪತಿಯ ಪುತ್ರಿ. ಸಿಂಚನ, ಭೂಮಿಕಾ, ಉಷಾ, ಭವನಾ ಹಾಗೂ ಗಾನಾವಿ ಉತ್ತಮ ಪ್ರದರ್ಶನ ನೀಡಿದರು. ಎರಡು ತಂಡಗಳಿಗೆ ಕೊಡಗಿನ ವೀರಾಜಪೇಟೆಯ ರೈಶಿಂಗ್ ಸ್ಟಾರ್ ಕೋಚಿಂಗ್ ಸೆಂಟರ್‌ನ ಶಿಬಿರದಲ್ಲಿ ತರಬೇತಿ ಪಡೆದಿದ್ದರು.

Related posts

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಸೋಣಂದೂರು ಸ ಹಿ ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

Suddi Udaya

ಹೊಸಂಗಡಿ: ಕಲ್ಯಾಣಿ ನಿಧನ

Suddi Udaya
error: Content is protected !!