23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ ಶಿಪ್-2024ಕ್ಕೆ ಖೇಲೋ ಭಾರತ್ ಯೂತ್ ಗೇಮ್ಸ್ ಫೆಡರೇಶನ್ ಇಂಡಿಯಾ ತಂಡವನ್ನು ಪ್ರತಿನಿಧಿಸಿದ ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನಗಳಿಸಿ ಹೊರ ಹೊಮ್ಮಿದೆ.

ನೇಪಾಳದ ಪೋಖರ ರಂಗಶಾಲಾದಲ್ಲಿ ಆ.31, ಸೆ.1,2ರಂದು ನಡೆದ ಪಂದ್ಯಾಟದಲ್ಲಿ ಭಾಗವಹಿಸಿದ ಪುರುಷ ಮತ್ತು ಮಹಿಳೆಯರ ಖೇಲೋ ಭಾರತ್ ಯೂತ್ ಗೇಮ್ಸ್ ಫೆಡರೇಶನ್ ಇಂಡಿಯಾ ತಂಡ ಪ್ರಥಮ ಸ್ಥಾನಗಳಿಸಿ ಜಯಶಾಲಿಯಾಗಿದೆ.

ಪುರುಷರ ತಂಡದಲ್ಲಿ ವೈಯಕ್ತಿಕ ನೆಲೆಯಲ್ಲಿ ತಂಡದ ನಾಯಕ ಕಣಿಯೂರು ಗ್ರಾಮದ ಕದ್ರಿ ನಿವಾಸಿ ರತ್ನ ಕೆ. ಮತ್ತು ಮಂಜುನಾಥ್ ಗೌಡ ದಂಪತಿಯ ಪುತ್ರ ಯೂನಿತ್ ಕೆ. ಉತ್ತಮ ಅಲ್ ರೌಂಡರ್ ಪ್ರಶಸ್ತಿ ಪಡೆದರು. ಇಳಂತಿಲ ಗ್ರಾಮದ ನೆಲ್ಲಿಪಲ್ಲಿಕೆ ನಿವಾಸಿ ಧನಂಜಯ ಗೌಡ ಮತ್ತು ಭಾರತಿ ದಂಪತಿಯ ಪುತ್ರ ರೋಹಿತ್ ಉತ್ತಮ ಎಸೆತಗಾರ ಪ್ರಶಸ್ತಿ ಮುಡಿಗೇರಿಸಿಕೊಂಡರು. ಮಡಂತ್ಯಾರಿನ ಸೇಬಾಸ್ಟಿನ್ ವೇಗಸ್ ಹಾಗೂ ಲೀನಾ ವೇಗಸ್ ದಂಪತಿಯ ಪುತ್ರ ಶಾನ್ ವೇಗಸ್ ಹಾಗೂ ಅಚ್ಚುತ ಮತ್ತು ಗಿರಿಜಾ ರವರ ಪುತ್ರ ಅವಿನಾಶ್ ಉತ್ತಮ ಪ್ರದರ್ಶನ ನೀಡಿದರು. ಪ್ರಜ್ವಲ್, ಕರಿಯಪ್ಪ, ದಿಕ್ಷೀತ್, ರವಿ ವರ್ಧನ್, ರಕ್ಷಿತ್, ಪೆಮ್ಮೆಯ್ಯ ಹಾಗೂ ದರ್ಶನ್ ತಂಡದಲ್ಲಿದ್ದರು.

ಮಿಂಚಿದ ಮಡಂತ್ಯಾರಿನ ಡಾಫ್ನಿ ವೆರೋನಿಕ: ಮಹಿಳೆಯರ ತಂಡವನ್ನು ಪ್ರತಿನಿಧಿಸಿದ ಮಡಂತ್ಯಾರಿನ ಕ್ಲೋಡ್ ಫ್ರಾನ್ಸಿಸ್ ಮಿಸ್ಕ್ಯುತ್ ಹಾಗೂ ಡಯಾನ ಮಿಸ್ಕ್ಯುತ್ ದಂಪತಿ ಪುತ್ರಿ ಡಾಫಿ ವೆರೋನಿಕ ಉತ್ತಮ ಅಲ್ ರೌಂಡ‌ರ್ ಪ್ರಶಸ್ತಿಗೆ ಭಾಜನರಾದರು. ತಂಡದ ನಾಯಕಿ ಸುಪ್ರಿಯಾ ಎಸ್.ಪಿ. ಉತ್ತಮ ಎಸೆತಗಾರ ಪ್ರಶಸ್ತಿ ಪಡೆದರು. ಇವರು ಬಂಟ್ವಾಳ ತಾಲೂಕಿನ ಕಸಬಾ ಕೆತ್ತಿಮಾರಿನ ನಿವಾಸಿ ಶೀನಾಥ್ ಸಿ. ಹಾಗೂ ಪೂರ್ಣಿಮಾ ದಂಪತಿಯ ಪುತ್ರಿ. ಸಿಂಚನ, ಭೂಮಿಕಾ, ಉಷಾ, ಭವನಾ ಹಾಗೂ ಗಾನಾವಿ ಉತ್ತಮ ಪ್ರದರ್ಶನ ನೀಡಿದರು. ಎರಡು ತಂಡಗಳಿಗೆ ಕೊಡಗಿನ ವೀರಾಜಪೇಟೆಯ ರೈಶಿಂಗ್ ಸ್ಟಾರ್ ಕೋಚಿಂಗ್ ಸೆಂಟರ್‌ನ ಶಿಬಿರದಲ್ಲಿ ತರಬೇತಿ ಪಡೆದಿದ್ದರು.

Related posts

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya
error: Content is protected !!