24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

ಬೆಳ್ತಂಗಡಿ :ಕೇಂದ್ರ ಸರಕಾರದ ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ಕೇಂದ್ರ‌‌ ಉಕ್ಕು ಸಚಿವರಾದ ಹೆಚ್.ಡಿ ಕುಮಾರಸ್ವಾಮಿಯವರನ್ನು ಒತ್ತಾಯಿಸುವ ಅಂಗವಾಗಿ ರಾಜ್ಯಸಭಾ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಬಿಎಮ್ಎಸ್ ಸದಸ್ಯರು ಧರ್ಮಸ್ಥಳದಲ್ಲಿ ಭೇಟಿಯಾಗಿ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯನ್, ದ.ಕ ಜಿಲ್ಲಾ ಬಿಎಮ್ಎಸ್ ಇದರ ಜಿಲ್ಲಾಧ್ಯಕ್ಷರು, ವಕೀಲರಾದ ಅನಿಲ್ ಕುಮಾರ್ ಯು ರವರುಗಳ ನೇತೃತ್ವದಲ್ಲಿ (KIOCL) ಕುದುರೆಮುಖ ಮಜ್ದೂರ್ ಸಂಘದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂದ್ರೇಗೌಡ, ಕಾರ್ಯಾಧ್ಯಕ್ಷರುಗಳಾದ ಭಗವಾನ್ ದಾಸ್ ಬಿ ಎನ್, ಕೆಂಚೇಗೌಡ, ಖಜಾಂಚಿ ಉದಯಕುಮಾರ್ ಬಿ ಸಿ ಸಂಘಟನಾ ಕಾರ್ಯದರ್ಶಿಯಾದ ಶ್ರೀಧರ್ ಉಳ್ಳಾಲ್, ಪಾಲಯ್ಯ, ಶ್ರೀಮಂದ್ರ ಇವರುಗಳು ಉಪಸ್ಥಿತಿ ಇದ್ದು ತ್ವರಿತವಾಗಿ ವಿಲೀನ ಪ್ರಕ್ರಿಯೆಯನ್ನು ಜಾರಿಗೊಳಿಸಲು ಸಹಕರಿಸಬೇಕಾಗಿ ವಿನಂತಿಸಲಾಯಿತು. ಮನವಿಯನ್ನು ಸ್ವೀಕರಿಸಿ ಮಾನ್ಯ ಪ್ರಧಾನಮಂತ್ರಿಯವರಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಿ ತ್ವರಿತ ಗತಿಯಲ್ಲಿ ವಿಲೀನ ಪ್ರಕ್ರಿಯೆಯನ್ನು ಮಾಡುವಂತೆ ನಾನು ಕೂಡ ಮನವಿ ಮಾಡುತ್ತೇನೆ, ಹಾಗೆಯೇ ಸಚಿವರಾದ ಕುಮಾರಸ್ವಾಮಿ ಯವರು ಸದ್ಯದಲ್ಲಿಯೇ ಕ್ಷೇತ್ರಕ್ಕೆ ಭೇಟಿ ನೀಡುವ ಸಮಯದಲ್ಲಿ ಈ ಬಗ್ಗೆ ಮಾತುಕತೆ ಮಾಡಿ ಗುಣಾತ್ಮಕವಾಗಿ ಒಟ್ಟಾಗಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ಖಂಡಿತಾ ಮಾಡೋಣ ಎಂದು ಭರವಸೆ ನೀಡಿದರು.

Related posts

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya
error: Content is protected !!