ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

ಬೆಳ್ತಂಗಡಿ :ಕೇಂದ್ರ ಸರಕಾರದ ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ಕೇಂದ್ರ‌‌ ಉಕ್ಕು ಸಚಿವರಾದ ಹೆಚ್.ಡಿ ಕುಮಾರಸ್ವಾಮಿಯವರನ್ನು ಒತ್ತಾಯಿಸುವ ಅಂಗವಾಗಿ ರಾಜ್ಯಸಭಾ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಬಿಎಮ್ಎಸ್ ಸದಸ್ಯರು ಧರ್ಮಸ್ಥಳದಲ್ಲಿ ಭೇಟಿಯಾಗಿ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯನ್, ದ.ಕ ಜಿಲ್ಲಾ ಬಿಎಮ್ಎಸ್ ಇದರ ಜಿಲ್ಲಾಧ್ಯಕ್ಷರು, ವಕೀಲರಾದ ಅನಿಲ್ ಕುಮಾರ್ ಯು ರವರುಗಳ ನೇತೃತ್ವದಲ್ಲಿ (KIOCL) ಕುದುರೆಮುಖ ಮಜ್ದೂರ್ ಸಂಘದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂದ್ರೇಗೌಡ, ಕಾರ್ಯಾಧ್ಯಕ್ಷರುಗಳಾದ ಭಗವಾನ್ ದಾಸ್ ಬಿ ಎನ್, ಕೆಂಚೇಗೌಡ, ಖಜಾಂಚಿ ಉದಯಕುಮಾರ್ ಬಿ ಸಿ ಸಂಘಟನಾ ಕಾರ್ಯದರ್ಶಿಯಾದ ಶ್ರೀಧರ್ ಉಳ್ಳಾಲ್, ಪಾಲಯ್ಯ, ಶ್ರೀಮಂದ್ರ ಇವರುಗಳು ಉಪಸ್ಥಿತಿ ಇದ್ದು ತ್ವರಿತವಾಗಿ ವಿಲೀನ ಪ್ರಕ್ರಿಯೆಯನ್ನು ಜಾರಿಗೊಳಿಸಲು ಸಹಕರಿಸಬೇಕಾಗಿ ವಿನಂತಿಸಲಾಯಿತು. ಮನವಿಯನ್ನು ಸ್ವೀಕರಿಸಿ ಮಾನ್ಯ ಪ್ರಧಾನಮಂತ್ರಿಯವರಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಿ ತ್ವರಿತ ಗತಿಯಲ್ಲಿ ವಿಲೀನ ಪ್ರಕ್ರಿಯೆಯನ್ನು ಮಾಡುವಂತೆ ನಾನು ಕೂಡ ಮನವಿ ಮಾಡುತ್ತೇನೆ, ಹಾಗೆಯೇ ಸಚಿವರಾದ ಕುಮಾರಸ್ವಾಮಿ ಯವರು ಸದ್ಯದಲ್ಲಿಯೇ ಕ್ಷೇತ್ರಕ್ಕೆ ಭೇಟಿ ನೀಡುವ ಸಮಯದಲ್ಲಿ ಈ ಬಗ್ಗೆ ಮಾತುಕತೆ ಮಾಡಿ ಗುಣಾತ್ಮಕವಾಗಿ ಒಟ್ಟಾಗಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ಖಂಡಿತಾ ಮಾಡೋಣ ಎಂದು ಭರವಸೆ ನೀಡಿದರು.

Related posts

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ನಾರಾವಿಯ ಶರತ್ ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ಆಯ್ಕೆ

Suddi Udaya
error: Content is protected !!