24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

ಬೆಳ್ತಂಗಡಿ: ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ತ್ವರಿತವಾಗಿ ಸಾರ್ವಜನಿಕರಿಗೆ ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಾಲೂಕಿನಾದ್ಯಂತ ಒಂದು ವಾರದ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

ಅದರಂತೆ ಸೆಪ್ಟೆಂಬರ್-8 ರೊಳಗೆ ಬೆಳ್ತಂಗಡಿ ತಾಲೂಕಿನ ಎಲ್ಲಾ ರೈತರು ತಮ್ಮ ಆಧಾರ್ ಕಾರ್ಡ್, ಪಹಣಿ ಪತ್ರ ಮತ್ತು ಆಧಾರ್ ಲಿಂಕ್ ಆಗಿರುವ ಮೊಬೈಲ್‌ಗಳ ಜೊತೆ ಕೂಡಲೇ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿ ಸಂಪರ್ಕಿಸುವುದು. ಖುದ್ದಾಗಿ ಸಂಪರ್ಕಿಸಲು ಸಾಧ್ಯವಾಗದ ರೈತರು ದೂರವಾಣಿ ಮೂಲಕ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಿಸುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya
error: Content is protected !!